ALSO FEATURED IN

ವಿದ್ಯಾರ್ಥಿಗಳು ಸೇವಾದಳಕ್ಕೆ ಸದಸ್ಯರಾಗಬೇಕು

Spread the love

ಚಿಕ್ಕಮಗಳೂರು:  ರಾಷ್ಟ್ರಭಕ್ತಿ ದೇಶಪ್ರೇಮ ಮತ್ತು ಶಿಸ್ತನ್ನು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸೇವಾದಳಕ್ಕೆ ಸದಸ್ಯರಾಗಬೇಕು ಎಂದು ತಾಲೂಕು ಕ್ರೀಡಾಧಿಕಾರಿ ಶೇಕ್ ಆಲಿ ಹೇಳಿದರು

ಹಿರೇಮಗಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳದ ತಾಲೂಕು ಘಟಕ ಶನಿವಾರ ಏರ್ಪಡಿಸಿದ್ದ ಶಾಲೆಗಳಲ್ಲಿ ಸೇವಾದಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು

ಭಾರತ ಸೇವಾದಳ ರಾಷ್ಟ್ರಭಕ್ತಿ ದೇಶಪ್ರೇಮ ತ್ಯಾಗ ಮತ್ತು ಶಿಸ್ತಿಗೆ ಹೆಸರಾದ ಸಂಸ್ಥೆ ದೇಶದ ಸ್ವಾತಂತ್ರ ಹೋರಾಟಕ್ಕೆ ರಾಷ್ಟ್ರಭಕ್ತರನ್ನು ದೇಶಭಕ್ತರನ್ನು ನೀಡಿದ ಹೆಗ್ಗಳಿಕೆ ಸೇವಾದಳಕ್ಕಿದೆ ಎಂದರು

ಭಾರತ ಸೇವಾದಳಕ್ಕೆ ಸೇರ್ಪಡೆಯಾಗುವುದರಿಂದ ಮಕ್ಕಳಲ್ಲಿ ದೇಶಭಕ್ತಿ ರಾಷ್ಟ್ರ ಪ್ರೇಮ ಶಿಸ್ತು ತ್ಯಾಗ ಮನೋಭಾವ ಬೆಳೆಯುತ್ತದೆ ಎಂದ ಅವರು ಪೋಷಕರು ಇದನ್ನು ಅರಿತು ತಮ್ಮ ಮಕ್ಕಳನ್ನು ಸೇವಾದಳಕ್ಕೆ ಸೇರಿಸಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು

ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಹಂಪಯ್ಯ ಮಾತನಾಡಿ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿ ಶಾಲೆಗಳಲ್ಲೂ ಸೇವಾದಳದ ಘಟಕಗಳನ್ನು ಸ್ಥಾಪಿಸಬೇಕು ಎಂದು ಮನವಿ ಮಾಡಿದರು

ಪ್ರಾಸ್ತಾವಿಕವಾಗಿ ಮಾತನಾಡಿದ ಭಾರತ ಸೇವಾದಳದ ನಿಕಟ ಪೂರ್ವ ತಾಲೂಕು ಸಂಘಟಕ ಎಸ್ ಈ ಲೋಕೇಶ್ವರಾಚಾರ್ ಮಕ್ಕಳಲ್ಲಿ ರಾಷ್ಟ್ರೀಯತೆ ದೇಶಭಕ್ತಿ ದೇಶಪ್ರೇಮ ರಾಷ್ಟ್ರಧ್ವಜ ರಾಷ್ಟ್ರಗೀತೆ ಭಾವೈಕ್ಯತೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸೇವಾದಳದಿಂದ ಪ್ರತಿ ವಾರಕ್ಕೊಂದು ಶಾಲೆಗಳಲ್ಲಿ ಸೇವಾದಳ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು

ರಾಷ್ಟ್ರಗೀತೆ ರಾಷ್ಟ್ರಧ್ವಜ ಭಾರತ ಸೇವಾದಳದ ಇತಿಹಾಸ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಲಾಯಿತು

ಭಾರತ ಸೇವಾದಳದ ತಾಲೂಕು ಕಾರ್ಯದರ್ಶಿ ಮಹೇಶಪ್ಪ ಉಪಾಧ್ಯಕ್ಷ ಕಾಳಯ್ಯ ಜಿಲ್ಲಾ ಸಂಘಟನಾ ಚಂದ್ರಕಾಂತ ಮುಖ್ಯ ಶಿಕ್ಷಕಿ ಶಿವಮ್ಮ ಶಿಕ್ಷಕರಾದ ವಿಲ್ಮಾ ರಾಧಾಮಣಿ ಉಪಸ್ಥಿತರಿದ್ದರು

Students should become members of Seva Dal

 

Facebook
X
WhatsApp
Telegram
Spread the love

ಚಿಕ್ಕಮಗಳೂರು: ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ…

Spread the love

ಚಿಕ್ಕಮಗಳೂರು: ತಾಲ್ಲೂಕಿನ ಇಂದಾವರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಐ.ಬಿ.ಸುಭಾಶ್ ಅವರು ಇಂದು ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ…

Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ…

Spread the love

ಚಿಕ್ಕಮಗಳೂರು: ತಾಲ್ಲೂಕಿನ ಇಂದಾವರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಐ.ಬಿ.ಸುಭಾಶ್ ಅವರು ಇಂದು ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ…

Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

[t4b-ticker]
Exit mobile version