July 27, 2024
ಬಸ್ ಸುಟ್ಟು ಕರಕಲಾದ ಐರಾವತ ಸೆಮಿಸ್ಲೀಪರ್ ಬಸ್

ಬಸ್ ಸುಟ್ಟು ಕರಕಲಾದ ಐರಾವತ ಸೆಮಿಸ್ಲೀಪರ್ ಬಸ್

ಚಿಕ್ಕಮಗಳೂರು: ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿದ್ದ ಐರಾವತ ಸೆಮಿಸ್ಲೀಪರ್ ಬಸ್‌ನಲ್ಲಿ ಸೋಮವಾರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.

ಐರಾವತ ಸೆಮಿ ಸ್ಲೀಪರ್ ಬಸ್ ೪೦ ಪ್ರಯಾಣಿಕರನ್ನು ಹೊತ್ತು ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿತ್ತು. ಬಸ್ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಕ್ರಾಸ್ ಬಳಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೆ ಬಸ್ ನಿಲ್ಲಿಸಿದ್ದಾರೆ. ಬಳಿಕ ಚಾಲಕ ಮತ್ತು ಕಂಡಕ್ಟರ್ ಮಲಗಿದ್ದ ಪ್ರಯಾಣಿಕರನ್ನು ಬಸ್‌ನಿಂದ ಕೆಳಗೆ ಇಳಿಸಿದ್ದಾರೆ.

ಬಳಿಕ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಗ್ನಿಶಾಮಕ ದಳದ ವಾಹನ ಬರುವಷ್ಟರಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಬಂದ ಕೂಡಲೆ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೂ ಬಸ್ ಸುಟ್ಟು ಕರಕಲಾಗಿದೆ. ಶಾರ್ಟ್

ಸರ್ಕ್ಯೂಟ್‌ನಿಂದ ಬಸ್‌ಗೆ ಬೆಂಕಿ ಹತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ. ತರೀಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

The bus was an Iravata semisleeper bus that was burnt

 

About Author

Leave a Reply

Your email address will not be published. Required fields are marked *