ಚಿಕ್ಕಮಗಳೂರು: ಎಸ್.ಸಿ ಹಾಗೂ ಎಸ್.ಟಿ ಸಮುದಾಯದ ಐ.ಎ.ಎಸ್ ಹಾಗೂ ಐ. ಆರ್.ಎಸ್ ಆಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ದೆಹಲಿಯಲ್ಲಿ ಹಾಸ್ಟೆಲ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿರುವ ಕ್ರಮ ಸ್ವಾಗತಾರ್ಹ ಎಂದು ಕೆಪಿಸಿಸಿ ಸಂಯೋಜಕ ಹಿರೇಮಗಳೂರು ರಾಮಚಂದ್ರ ಹೇಳಿದ್ದಾರೆ.
ಈ ಕುರಿತು ಹೇಳಿಕೆಯಲ್ಲಿ ತಿಳಿಸಿರುವ ಹಾಸ್ಟೆಲ್ನಲ್ಲಿ ದಾಖಲಾಗುವ ಅವರು ಪ.ಜಾತಿ, ಪ.ಪಂಗಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿ ಖರೀದಿ, ಇತರೆ ಖರ್ಚು ವೆಚ್ಚಗಳನ್ನು ಭರಿಸಲು ತಿಂಗಳಿಗೆ ೧೫ ಸಾವಿರ ರೂಪಾಯಿ ಆರ್ಥಿಕ ನೆರವನ್ನು ಸರ್ಕಾರ ನೀಡಲಿದೆ ಎಂದ ತಿಳಿಸಿದ್ದಾರೆ.
ದೆಹಲಿಯಲ್ಲಿ ನಿರ್ಮಾಣವಾಗುವ ಹಾಸ್ಟೆಲ್ನಲ್ಲಿ ಹೈಟೆಕ್ ಲೈಬ್ರೆರಿ ಸ್ಥಾಪನೆಯಾಗಲಿದ್ದು. ಅಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಅಗತ್ಯವಿರುವ ಎಲ್ಲಾ ಪುಸ್ತಕಗಳನ್ನು ಒದಗಿಸಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿ? ಜಾತಿ, ಪರಿಶಿಷ್ಠ ಪಂಗಡ ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯಲ್ಲಿ ಈ ಘೋ?ಣೆಯನ್ನು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ.
Hostel in Delhi for SC- ST students – welcome