ಚಿಕ್ಕಮಗಳೂರು: ಜಿಲ್ಲೆಗೆ ವಲಸೆ ಬಂದು ಕಾಫಿ ತೋಟಗಳಿಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಿರುವ ಬೀಟಮ್ಮ ಆನೆ ಗ್ಯಾಂಗ್ನ ಒಂದು ಸಲಗ ಸಾವನ್ನಪಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಮೃತಪಟ್ಟಿದ್ದು ಆಲ್ದೂರು ಸಮೀಪದ ತುಡುಕೂರು ಗ್ರಾಮದ ಕಾಫಿ ತೋಟಗಳ ನಡುವೆ ಮೃತ ಆನೆಯ ದೇಹ ಪತ್ತೆಯಾಗಿದೆ.
ಕಾಫಿನಾಡಲ್ಲಿ ೧೭ ಕಾಡಾನೆಗಳ ಹಿಂಡಿನ ಬೀಟಮ್ಮ ಗ್ಯಾಂಗಿನ ಹಾವಳಿ ವಿಪರೀತಗೊಂಡಿತ್ತು. ಈ ನಡುವೆ ಇಂದು ಬೀಟಮ್ಮ ಗ್ಯಾಂಗ್ ನ ಒಂದು ಸಲಗ ಸಾವನ್ನಪಿದೆ ವಿದ್ಯುತ್ ಸ್ಪರ್ಶಿಸಿ ಒಂದು ಸಲಗ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ತಾಲೂಕಿನ ತುಡುಕೂರು ಗ್ರಾಮದ ಕಾಫಿ ತೋಟಗಳ ಬಳಿ ಘಟನೆ ನಡೆದಿದ್ದು ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಒಂಟಿ ಸಲಗ ಸ್ಥಳದಲ್ಲೇ ಅಸುನೀಗಿದೆ.
ಕಳೆದ ೩ ದಿನಗಳಿಂದ ೧೭ ಕಾಡಾನೆ ಗಳ ಹಿಂಡು ಬೀಟಮ್ಮ ಗ್ಯಾಂಗ್ ತುಡುಕೂರು ಸುತ್ತಮುತ್ತ ಸಾಕಷ್ಟು ಬೆಳೆ ನಾಶ ಹಾಗೂ ಜನರಿಗೆ ಭೀತಿ ಹುಟ್ಟಿಸಿತ್ತು. ೩ದಿನಗಳಿಂದ ಬೀಟಮ್ಮ ಗ್ಯಾಂಗ್ ಆಲ್ದೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಟ್ ಮಾಡುತ್ತಿದ್ದವು . ಒಟ್ಟು ಇದ್ದ ೧೭ ಕಾಡಾನೆಗಳಲ್ಲಿ ಒಂದು ಸಲಗ ವಿದ್ಯುತ್ ಸ್ಪರ್ಶದಿಂದ ಸಾವು ಕಂಡಿದೆ
ಸದ್ಯ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿಯನ್ನು ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಬೀಟಮ್ಮ ಗ್ಯಾಂಗ್ ಹಾವಳಿ ತೀವ್ರಗೊಂಡಿತ್ತು.
One of the Beitamma elephant gangs died due to contact with electric wire