ಚಿಕ್ಕಮಗಳೂರು: ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ತುರ್ತು ಪರಿಸ್ಥಿತಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.
ನನ್ನ ಮೇಲೆ ದೈಹಿಕ ಹಲ್ಲೆ ಸಂಬಂಧ ಕಿಶೋರ್, ಅರುಣ್ ದೂರು ನೀಡಿದ್ದಾರೆ. ಪಶ್ಚಿಮ ಬಾಗಿಲಿನಲ್ಲಿ ನಮ್ಮ ಮೇಲೆ ಹಲ್ಲೆ ನಡೆದಾಗ ಅರುಣ್ ನನ್ನ ಜೊತೆ ಇದ್ರು, ಒಳಗಡೆ ಹಲ್ಲೆ ವೇಳೆ ಕಿಶೋರ್ ನನ್ನ ಜೊತೆ ಇದ್ರು, ಹಾಗಾಗಿ, ಅವರುಗಳು ದೂರು ನೀಡಿದ್ದಾರೆ. ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ. ಖಾನಾಪುರದಲ್ಲಿ ನಾನು ದೂರು ನೀಡಿದ್ದೇನೆ. ಎಫ್.ಐ.ಆರ್. ಕೊಟ್ಟಿಲ್ಲ ಎಂದು ಹೇಳಿದರು.
ಎಫ್ಐಆರ್ಗಾಗಿ ನಿನ್ನೆ ಹೋಗಿದ್ದಾರೆ, ಇಂದು ಹೋಗಿದ್ದಾರೆ, ಕಮಿಷನರ್ 15 ದಿನ ಟೈಂ ಇದೆ ಎಂದಿದ್ದಾರೆ. ಬಿಜೆಪಿಗೆ ಬೇರೆ, ಕಾಂಗ್ರೆಸ್ಗೆ ಬೇರೆ ಕಾನೂನಿಲ್ಲ, ನನ್ನ ದೂರಿಗೂ ಸೂಕ್ತ ಕ್ರಮ ಕೈಗೊಳ್ಳಬೇಕಾಗಿತ್ತು, ಕಮಿಷನರ್ ಆ ಜಾಗದಲ್ಲಿ ಇರಲು ಸೂಕ್ತವಲ್ಲ, ನಾನು ಹೆದರಿ ಹೋಗುವವನಲ್ಲ, ನಮ್ಮ ಕಾರ್ಯಕರ್ತರು ಕೂಡ ಎಂದರು.
ಇಬ್ಬರು ಲಕ್ಷ್ಮಿ ಪಿಎ ಬಹುತೇಕರು ಮುಸ್ಲಿಮರು ಇದ್ದಾರೆ, ಯಾರೂ ಅಪರಿಚಿತರಲ್ಲ, ಮಾಹಿತಿ ಕಲೆ ಹಾಕಿ ಎಲ್ಲವನ್ನೂ ಕೊಡ್ತೀವಿ, ಎಲ್ಲರ ಹೆಸರು ಹಾಕಿ ದೂರು ನೀಡಿದ್ದೇನೆ, ನನ್ನ ಮೇಲೆ ಕ್ರಮ ಮಾಡ್ತಾರೆ, ಅವರ ಮೇಲೆ ಏಕಿಲ್ಲ ಎಂದು ಪ್ರಶ್ನಿಸಿದರು.
ಸಿ.ಟಿ. ರವಿ ಅವರಿಗೆ ಏನೂ ಆಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರು ವೈದ್ಯರಲ್ಲ, ಆಗಿರುವ ಗಾಯ, ರಕ್ತ ಜಗತ್ತೇ ನೋಡಿದೆ. ಗಾಯದ ಬಳಿಕವೂ 3-4 ಗಂಟೆ ಚಿಕಿತ್ಸೆ ಕೊಡಿಸಿಲ್ಲ. ಗಾಯ ಆಗಿದ್ದು ಖಾನಪುರದಲ್ಲಿ ಚಿಕಿತ್ಸೆ ನೀಡಿದ್ದು ರಾಮದುರ್ಗದಲ್ಲಿ ಎಂದರು.
ಅವರ ತಪ್ಪು ಮುಚ್ಚಿಕೊಳ್ಳಲು ಆ ತಾಯಿ ಸುಳ್ಳುಗಳ ಸರಮಾಲೆ ಹೆಣೆದಿದ್ದಾರೆ. ಸುಳ್ಳನ್ನ ಸೋಲಿಸಬಹುದು, ಸತ್ಯವನ್ನ ಸೋಲಿಸಲು ಆಗಲ್ಲ.
ಜಯಮಾಲಾ ಮಂತ್ರಿ ಆದಾಗ ಈ ಮಹಾ ತಾಯಿ ಹೇಳಿದ ಮಾತು ಕೇಳಿದ್ದಾರೆ. ಕಣ್ಣೀರಿನಿಂದ ಬೆನಿಫಿಟ್ ಗಿಟ್ಡಿಸಿಕೊಳ್ಳಬಹುದು ಅಂದು ಕೊಂಡಿರಬಹುದು ಎಂದರು.
ನನ್ನ ಪಿಎಗಳು ಲಂಚ ಕೇಳಿದ ಉದಾಹರಣೆ ಇಲ್ಲ, ಯಾರೂ ಸತ್ತಿಲ್ಲ, ಕೊಲೆಗಡುಕರು ಯಾರು, ಎಲ್ಲವನ್ನೂ ಹೇಳುವ ಅಗತ್ಯವಿಲ್ಲ,
ಯಾರ ರಾಜಕೀಯ ಹೇಗೆ ಶುರುವಾಯ್ತು ಸ್ಥಳಿಯರಿಂದ ಕೇಳಿ, ಮೋದಿ ಹತ್ರ ಹೋಗ್ತೀನಿ ಅಂತಾರೆ ಲಕ್ಷ್ಮಿ, ಬಿಜೆಪಿ ಯವರು ಎಲ್ಲರೂ ದುಷ್ಯಾಸನರಾದರೆ ಅವರ ಬಳಿ ಏಕೆ ನ್ಯಾಯ ಕೇಳುತ್ತಾರೆ ಎಂದರು.
ಪಕ್ಕೆ, ಬೆನ್ನಿನಲ್ಲಿ 3-4 ಗುರುತುಗಳು ಇನ್ನೂ ಇವೆ. ಅವರ ಪಿಎ ಗೆ ಅಷ್ಟು ಸೊಕ್ಕು ಹೇಗೆ, ಎಲ್ಲಿಂದ ಬಂತು. ಆ ಸೊಕ್ಕಿಗೆ ಕಾರಣ ಯಾರು ?ಗೂಂಡಾಗಳಿಗೆ ಪಾಸ್ ಕೊಟ್ಟಿದ್ದು ಯಾರು ? ಈ ಗಾಯ, ಮಾರ್ಕ್ ಯಾರು ಮಾಡಿದ್ದು ಎಂದು ಪ್ರಶ್ನಿಸಿದ ಅವರು, ಓರ್ವ ಶಾಸಕನಿಗೆ ಸುತ್ತಾಡಿಸಿದ್ದು, ಹಿಂಸೆ ಕೊಟ್ಡಿದ್ದ ಆ ಮಹಾತಾಯಿ ಹೇಗೆ ಒಪ್ಪಿಕೊಳ್ತಾರೆ ಎಂದು ಹೇಳಿದರು.
ಮೈಸೂರಿನಲ್ಲಿ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ಧರಾಮಯ್ಯ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಅವರು ಏನೇನು ಕೇಳಿಸಿಕೊಂಡರೂ ಹೇಳಲಿ. ಜಾಣ ಕುರುಡು, ಜಾಣ ಕಿವುಡು ಆಗೋದು ಬೇಡ ಅವರು ಸ್ವತಂತ್ರರಿದ್ದಾರೆ, ಕಾಲ್ ಲೀಸ್ಟ್ ತೆಗೆದರೆ ಯಾರ್ಯಾರು ಸಂಪರ್ಕದಲ್ಲಿ ಇದ್ದರು ಗೊತ್ತಾಗುತ್ತೆ ಎಂದರು.
There is no law different for BJP and Congress in the state.