ALSO FEATURED IN

Lakshmi Devi Temple:೧ ಕೋಟಿ ವೆಚ್ಚದಲ್ಲಿ ಲಕ್ಷ್ಮಿದೇವಿ ದೇವಾಲಯ ನಿರ್ಮಾಣ

Spread the love

ಚಿಕ್ಕಮಗಳೂರು: ವಾರ್ಷಿಕವಾಗಿ ಅದ್ದೂರಿ ವೆಚ್ಚದಲ್ಲಿ ಆಚರಿಸುವ ಹಬ್ಬಗಳನ್ನು ತಾತ್ಕಾಲಿಕವಾಗಿ ಮುಂದೂಡುವ ಮೂಲಕ ಗ್ರಾಮಕ್ಕೊಂದು ಸುಂದರ ದೇವಾಲಯ ನಿರ್ಮಾಣ ಮಾಡಿದರೆ ಗ್ರಾಮಸ್ಥರಲ್ಲಿ ಧಾರ್ಮಿಕ ಭಾವನೆ ಬೆಳೆಯನ್ನು ಸಹಕಾರಿಯಾಗುತ್ತದೆ ಎಂದು ಮಾಜಿ ವಿಧಾನ ಪರಿ?ತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ಅಭಿಪ್ರಾಯಿಸಿದರು.

ಅವರು ಇಂದು ತಾಲೂಕಿನ ಸಿರಬಡಿಗೆ ಗ್ರಾಮದಲ್ಲಿ ಸುಮಾರು ಒಂದು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಲಕ್ಷ್ಮಿದೇವಿ ದೇವಸ್ಥಾನಕ್ಕೆ ಬಾಗಿಲು ಪೂಜೆ ನೆರವೇರಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಭಾವನೆಗಳಿಂದ ಯುವ ಜನಾಂಗ ದೂರು ಇರುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಗ್ರಾಮದ ಹಿರಿಯರು ದೇವಾಲಯ ನಿರ್ಮಾಣ ಮಾಡಲು ಭದ್ರ ಬುನಾದಿ ಹಾಕಿದಾಗ ಧಾರ್ಮಿಕತೆ, ಸಂಸ್ಕೃತಿ, ಪರಂಪರೆ ಬೆಳೆಯುತ್ತದೆ ಎಂದು ಹೇಳಿದರು.

ಶಾಸಕ ಹೆಚ್.ಡಿ. ತಮ್ಮಯ್ಯನವರ ಅನುದಾನದಲ್ಲಿ ೧೦ ಲಕ್ಷ ರೂ ಹಾಗೂ ವಿಧಾನ ಪರಿ?ತ್ ಸದಸ್ಯರ ಅನುದಾನದಲ್ಲಿ ೫ ಲಕ್ಷ ರೂ ಮಂಜೂರು ಮಾಡಿಸುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಅನಗತ್ಯ ಖರ್ಚುವೆಚ್ಚಗಳಿಗೆ ಕಡಿವಾಣ ಹಾಕಿ ಅದೇ ಹಣವನ್ನು ಸುಂದರ ದೇವಾಲಯಗಳ ನಿರ್ಮಾಣಕ್ಕೆ ಬಳಸಲು ಮುಂದಾಗಬೇಕೆಂದು ಕರೆ ನೀಡಿದರು.
ಸಿರಬಡಿಗೆ ಗ್ರಾಮದಲ್ಲಿ ಭೇಟಿನೀಡಿದ ಇವರನ್ನು ಗ್ರಾಮದ ಜನತೆ ಆತ್ಮೀಯವಾಗಿ ಸ್ವಾಗತಿಸಿ ಗೌರವ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಿಸಾನ್ ಸೆಲ್ ಬ್ಲಾಕ್ ಅಧ್ಯಕ್ಷ ಸಿ.ಸಿ.ಮಧು, ಗ್ರಾ.ಪಂ ಸದಸ್ಯ ಹೆಚ್.ಎಸ್. ಚಂದ್ರಶೇಖರ್, ಗ್ರಾಮಸ್ಥರುಗಳಾದ ಎಸ್.ಕೆ.ನಾಗಪ್ಪ, ತಿಮ್ಮೇಗೌಡ, ಲೋಕೇಶ್, ಜಯಣ್ಣ, ಯುವರಾಜ, ತೇಜಮೂರ್ತಿ ಸೇರಿದಂತೆ ಮಹಿಳೆಯರು ಉಪಸ್ಥಿತರಿದ್ದರು.

Construction of Lakshmi Devi Temple at a cost of Rs. 1 crore

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version