ಚಿಕ್ಕಮಗಳೂರು: ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ಚಿಕ್ಕಮಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ನಿನ್ನೆ ಹಾಗೂ ಇವತ್ತು ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಎಂಬುವರ ಮಗಳ ಮದುವೆ ನಿಶ್ಚಯವಾಗಿತ್ತು. ಕೊನೆ ಮಗಳ ಮದುವೆ ಎಂದು ಚಂದ್ರು ಅದ್ಧೂರಿಯಾಗಿ ಮದುವೆಗೆ ತಯಾರಿ ಮಾಡಿದ್ದರು. ಆದರೆ, ಮಗಳ ಆರತಕ್ಷತೆಯ ದಿನ ಆತ್ಮೀಯ ಸ್ನೇಹಿತರೊಬ್ಬರಿಗೆ ಲಗ್ನಪತ್ರಿಕೆ ಕೊಟ್ಟಿಲ್ಲ ಎಂದು ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಹೋಗಿ ಕಾರ್ಡ್ ಕೊಟ್ಟು ಬರುವ ವೇಳೆ ಮಾರ್ಗ ಮಧ್ಯೆ ಬೈಕ್ ಅಪಘಾತವಾಗಿತ್ತು.
ತೀವ್ರ ಗಂಭೀರ ಗಾಯವಾಗಿದ್ದ ಚಂದ್ರುರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದ ಚಂದ್ರು ಭಾನುವಾರ ಮಧ್ಯಾಹ್ನನವೇ ಮರಣ ಹೊಂದಿದ್ದರು.
ವಿಷಯ ಮನೆಯವರಿಗೆ ತಿಳಿದರೆ ಮದುವೆ ನಿಲ್ಲುತ್ತೆ ಎಂದು ಕುಟುಂಬಸ್ಥರು ವಿಷಯವನ್ನ ಮೃತ ಚಂದ್ರು ಪತ್ನಿ ಹಾಗೂ ಮಗಳು ದೀಕ್ಷಾಗೆ ಹೇಳಲೇ ಇಲ್ಲ. ಅಪಘಾತವಾಗಿದೆ ಆಸ್ಪತ್ರೆಯಲ್ಲಿದ್ದಾರೆ ಎಂದು ಹೇಳಿ ಭಾನುವಾರ ಸಂಜೆ ಆರತಕ್ಷತೆ ಮುಗಿಸಿ, ಇಂದು ಬೆಳಗ್ಗೆ ಮುಹೂರ್ತವನ್ನೂ ಮುಗಿಸಿದ್ದಾರೆ. ಮುಹೂರ್ತ ಮುಗಿದ ಬಳಿಕ ವಿಷಯವನ್ನ ಮನೆಯವರಿಗೆ ತಿಳಿಸಲಾಗಿದೆ.
ವಿಷಯ ಕೇಳಿ ಮೃತನ ಪತ್ನಿ ಹಾಗೂ ಮಗಳಿಗೆ ಬರಸಿಡಿಲು ಬಡಿದಂತಾಗಿ ಕುಟುಂಬಸ್ಥರ ನೋವಿನ ಆಕ್ರಂದನ ಮುಗಿಲುಮುಟ್ಟಿದೆ. ಕಡೂರು ಪಟ್ಟಣದ ಬೀರೂರಿನ ತರಳಬಾಳು ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದು ಗಂಡು-ಹೆಣ್ಣು ಮನೆಗೆ ಬರುವ ವೇಳೆ ಮನೆಗೆ ತಂದೆಯ ಮೃತದೇಹ ಕೂಡ ಬಂದಿತ್ತು. ಮನೆಯವರು ಮಗಳ ಮದುವೆಯಾಯ್ತು ಅಂತ ಸಂತೋಷ ಪಡಬೇಕೋ ಅಥವ ಮನೆಯ ಯಜಮಾನ ಸಾವನ್ನಪ್ಪಿದ್ದಾನೆ ಎಂದು ಕಣ್ಣೀರಡಬೇಕೋ ತಿಳಿಯದಂತೆ ಕುಟುಂಬಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.
ಮೃತ ಚಂದ್ರುಗೆ ಮೂರು ಜನ ಹೆಣ್ಣು ಮಕ್ಕಳು. ಮೊದಲ ಮಗಳ ಮದುವೆಯಲ್ಲಿ ಕೊರೋನಾ ಅಡ್ಡಿ ಬಂತು ಅಂತ ಕುಟುಂಬಸ್ಥರು, ಸಂಬಂಧಿಕರಷ್ಟೆ ಪಾಲ್ಗೊಂಡು ಮದುವೆ ಮಾಡಿದ್ದರು. ಹಾಗಾಗಿ, ಕೊನೆ ಮಗಳ ಮದುವೆ. ಅದ್ಧೂರಿಯಾಗಿ ಮಾಡಬೇಕು ಅಂತ ಶಕ್ತಿ ಮೀರಿ ಮಗಳ ಮದುವೆಯನ್ನ ಅದ್ಧೂರಿಯಾಗಿ ಅರೆಂಜ್ ಮಾಡಿದ್ದರು.
ಆದರೆ, ಮದುವೆಗೆ ಅಪ್ಪನೇ ಇರಲಿಲ್ಲ. ಮಗಳು ಹಾಗೂ ಪತ್ನಿ ಕೇಳಿದರು ಕುಟುಂಬಸ್ಥರು ಕೊನೆ ಮದುವೆ ಇಷ್ಟಪಟ್ಟು ಕಷ್ಟಪಟ್ಟು ಮದುವೆ ಮಾಡಿದ್ದಾನೆ. ಮದುವೆ ನಿಲ್ಲಬಾರದು ಅಂತ ಆಸ್ಪತ್ರೆಯಲ್ಲಿ ಇದ್ದಾನೆ. ಚೆನ್ನಾಗಿದ್ದಾನೆ ಎಂದು ಹೇಳಿ ಮದುವೆ ಮುಗಿದ ಮೇಲೆ ವಿಷಯವನ್ನ ತಿಳಿಸಿದ್ದಾರೆ. ವಿಷಯ ತಿಳಿದ ತರೀಕೆರೆ ಚಂದ್ರು ಸ್ನೇಹಿತರು ಹಲವರು ಮದುವೆಗೆ ಹೋಗಿಲ್ಲ.
ಈ ಕುರುಳು ಹಿಂಡುವ ಕಥೆ ಕೇಳಿದ ಜನ ಕೂಡ ದೇವರು ಅತ್ಯಂತ ಕ್ರೂರಿ. ಯಾರಿಗೂ ಇಂತಹಾ ಪರಿಸ್ಥಿತಿ ಬರಬಾರದು ಎಂದು ದೇವರಿಗೆ ಹಿಡಿಶಾಪ ಹಾಕಿದ್ದಾರೆ.
Daughter enters married life without knowing father died