ALSO FEATURED IN

Accused arrested:ಅಂತರ್ ಜಿಲ್ಲಾ ಕಳವು-ದರೋಡೆ ಪ್ರಕರಣದ ಆರೋಪಿಗಳ ಬಂಧನ

Spread the love

ಚಿಕ್ಕಮಗಳೂರು:  ಅಂತರ್ ಜಿಲ್ಲಾ ಕಳವು- ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಬಂಗಾರದ ಗಟ್ಟಿ ಸೇರಿದಂತೆ ೨೫ ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅನೇಕ ಕಳ್ಳತನ ಪ್ರಕರಣ ನಡೆದಿದ್ದು ಪ್ರಭಾರ ವೃತ್ತ ನಿರೀಕ್ಷಕ ಗವಿರಾಜ್ ಪಿ.ಐ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ಬೆಂಗಳೂರಿನ ಆರ್ ಟಿ ನಗರದಲ್ಲಿ ನೆಲೆಸಿದ್ದ ಚಿಕ್ಕಮಗಳೂರು ಉಪ್ಪಳ್ಳಿ ನಿವಾಸಿ ಮೊಹಮದ್ ಕಬೀರ್, ಡಿಜೆ ಹಳ್ಳಿವಾಸಿ ಯೂಸುಫ ಪಾಷಾ ನನ್ನು ಬಂಧಿಸಿ ಒಟ್ಟು ೩೩೪ ಗ್ರಾಂ ಬಂಗಾರದ ಗಟ್ಟಿ, ಮತ್ತು ಕೃತ್ಯಕ್ಕೆಬಳಸಿದ್ದ ಬಜಾಜ್ ಪಲ್ಸರ್ ಬೈಕ್ ( ತುಮಕೂರಿನಲ್ಲಿ ಕಳವು ಮಾಡಿದ್ದು) ಒಟ್ಟು ಬೆಲೆ ೨೫,೦೦,೦೦೦ ವಶಪಡಿಸಿಕೊಳ್ಳಲಾಗಿದೆ.

ಅಹಮದ್ ಕಬೀರ್ ನನ್ನು ೨೦೨೩ ನೇ ಸಾಲಿನಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಬಂಧಿಸಿದ್ದು, ೧೨ ಮನೆಕಳವು ಪ್ರಕರಣಗಳು ಪತ್ತೆಯಾಗಿದ್ದು, ಆರೋಪಿಯಿಂದ ೨೯೫ ಗ್ರಾಂ ಚಿನ್ನ & ೩೫೦ ಗ್ರಾಂ ಬೆಳ್ಳಿಯ ಭರಣ ಹಾಗೂ ೧ ಪಿಸ್ತೂಲ್ & ಗುಂಡುಗಳು ದೊರೆತಿದ್ದವು.

ಪಿಸ್ತೂಲ್ ಅನ್ನುವೈಜ್ಞಾನಿಕ ಪರೀಕ್ಷೆಗೆ ಕಳುಹಿಸಿದಾಗ ೨೦೨೦ ರಂದು ಚಿಕ್ಕಮಗಳೂರು ನಗರದ ಕೇಸರಿ ಜ್ಯೂಯೆಲರಿ ಚಿನ್ನದ ಅಂಗಡಿಯಲ್ಲಿ ಗುಂಡು ಹಾರಿಸಿ ದರೋಡೆಗೆ ಪ್ರಯತ್ನಿಸಿದ್ದಾಗ ಸ್ಥಳದಲ್ಲಿ ದೊರೆತ ಗುಂಡಿಗೆ ಹೋಲಿಕೆಯಾಗಿರುವುದಾಗಿ ಎಫ್.ಎಸ್.ಎಲ್ ವರದಿಯಿಂದ ದೃಢಪಟ್ಟಿದೆ.

ಆರೋಪಿ ಕಬೀರ್ ಮತ್ತು ಆತನ ಸಹಚರರು ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವುದೂ ಬೆಳಕಿಗೆ ಬಂದಿದೆ. ಈತನ ವಿರುದ್ಧ ಮಂಗಳೂರು ನಗರ, ಶಿವಮೊಗ್ಗ , ತುಮಕೂರು , ದಾವಣಗೆರೆ , ಚಾಮರಾಜನಗರ ಜಿಲ್ಲೆ ಗಳಲ್ಲಿ ೫೦ ಕ್ಕೂ ಹೆಚ್ಚು ಕಳವು ಪ್ರಕರಣಗಳು ದಾಖಲಾಗಿದ್ದು, ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಈತನ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು,

ಈ ಆರೋಪಿಗಳನ್ನು ಪತ್ತೆ ಮಾಡುವ ತಂಡದಲ್ಲಿ ಅಬ್ದುಲ್ ಖಾದರ್‌ಸಿ,ಇ,ಎನ್ ಪಿ,ಎಸ್,ಐ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳಾದ ಹೆಚ್.ಸಿ ಹೆಚ್,ಎಸ್, ನಂಜಪ್ಪ, ಪೊಲೀಸ್ ಠಾಣೆ, ಪ್ರದೀಪ ,ಲೋಹಿತ್ ಸಿ,ಎಂ, ಗ್ರಾಮಾಂತರ ಪೊಲೀಸ್ ಠಾಣೆ, ಹೆಚ್ ಸಿ ರವೀಂದ್ರ ,ಮಧುಸೂಧನ್, ಲಿಂಗಮೂರ್ತಿ, ಡಿ.ಸಿ.ಆರ್.ಬಿ ವಿಭಾಗದ ಗಿರೀಶ್, ಹೆಚ್ ಸಿ, ಅನ್ವರ್ ಪಾಷ, ಹರಿಪ್ರಸಾದ್ ಹಾಗೂ ತಾಂತ್ರಿಕ ವಿಭಾಗದ ಅಬ್ದುಲ್ ರಬ್ಬಾನಿ, ಹಾಗು ಮಹಿಳಾ ಸಿಬ್ಬಂದಿ ಕು. ಪುಷಾ ಭಾಗವಸಿದ್ದರು. ಕಾರ್ಯಾಚರಣೆ ತಂಡಕ್ಕೆ ಪೊಲೀಸ್ ಅಧೀಕ್ಷಕರು ಬಹುಮಾನ ಘೋಷಿಸಿದ್ದಾರೆ.

Accused arrested in inter-district theft-robbery case

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version