ಚಿಕ್ಕಮಗಳೂರು: ದೇವಾಲಯಗಳನ್ನು ನಿರ್ಮಾಣ ಮಾಡುವುದು ಸುಲಬದ ಕಾರ್ಯವಲ್ಲ ನೂತನ ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಸಂಸ್ಕೃತಿಗಳ ಪುನರುತ್ಥಾನವಾಗುತ್ತದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು.
ತಾಲ್ಲೂಕಿನ ಲಕ್ಯಾ ಹೋಬಳಿಯ ಕೆ.ಬಿ.ಹಾಳ್ ಗ್ರಾಮದಲ್ಲಿ ಇಂದು ಶ್ರೀ ದುರ್ಗಾಬದೇವಿ ನೂತನ ದೇವಾಲಯ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಪೂರ್ವಿಕರು ಆಚರಿಸಿ ಬೆಳಿಸಿಕೊಂಡು ಬಂದಿರುವ ಸಂಸ್ಕಾರಯುತ ಕಾರ್ಯಗಳನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ಪರಿಚಯಿಸಿಕೊಡಬೇಕು ಎಂದರು.
ಯಾವುದೇ ದೇವಾಲಯಗಳ ನಿರ್ಮಾಣದ ನಂತರ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳೊಂದಿಗೆ ಅದರ ನಿರ್ವಾಹಣೆಯ ಕಾರ್ಯವು ವ್ಯವಸ್ಥಿತವಾಗಿರಬೇಕು. ದೇವಾಲಯಗಳಿಗೆ ತೆರಳಿ ಹೋರ ಬಂದ ಮಾನಸಿಕವಾಗಿ ಶಾಂತಿಯುತವಾಗಿರಲು ಸಾಧ್ಯವಾಗುತ್ತದೆ ಎಂದ ಅವರು ಪ್ರತಿಯೊಬ್ಬರೂ ದೇವರು, ಗುರು ಹಿರಿಯರನ್ನು ಪೂಜಿಸಿ ಗೌರವಿಸುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದರು.
ಸಾಹಿತಿಗಳಾದ ಚಟ್ನಳ್ಳಿ ಮಹೇಶ್ ಧಾರ್ಮಿಕ ಉಪನ್ಯಾಸ ನೀಡಿ ಇತ್ತೀಚಿನ ದಿನಗಳಲ್ಲಿ ಸುಳ್ಳು, ಮೋಸ, ಅನ್ಯಾಯದ ಕೃತ್ಯಗಳು ಹೆಚ್ಚುತ್ತಿದೆ. ಆತ್ಮ ಸಾಕ್ಷಿಯ ಮೂಲಕ ಮಾನವನೆ ಮಹಾ ದೇವನಾಗಬೇಕು, ನರ ಹರನಾಗಬೇಕು ಪ್ರತಿ ಮನೆಯು ಮಹಾ ಮನೆಯಾಗಬೇಕು ಎಂಬ ಸಂಕಲ್ಪದಿಂದ ನಮ್ಮ ಹಿರಿಯರು ದೇವಾಲಯಗಳ ನಿರ್ಮಾಣ ಮಾಡಿದ್ದಾರೆ. ಪ್ರತಿಯೊಬ್ಬರಲ್ಲಿರುವ ನಾನು ಎಂಬ ಅಸೂಹೆ, ಅಹಂಕಾರವನ್ನು ದೇವಾಲಯಗಳು ನಿರ್ಣಾಮ ಮಾಡುತ್ತವೆ ಎಂದ ಅವರು ದೇವಾಲಯಗಳ ನಿರ್ಮಾಣ ಕೇವಲ ಪ್ರದರ್ಶನವಲ್ಲ ಅದು ಆತ್ಮದ ಬೆಳಕು ಎಂದು ತಿಳಿಸಿದರು.
ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ ಮಾತನಾಡಿ ದೇವಾಲಯಗಳಲ್ಲಿ ಧನಾತ್ಮಕವಾದ ಶಕ್ತಿ ಅಡಗಿದೆ ಆದ್ಧರಿಂದ ಪ್ರತಿಯೊಬ್ಬರು ಕಷ್ಠದ ಸಮಯದಲ್ಲಿ ದೇವರ ಮೊರೆ ಹೋಗುತ್ತಾರೆ. ನಂಬಿಕೆಗೆ ಶಕ್ತಿಯಿದೆ. ಶ್ರದ್ಧೆ, ಭಕ್ತಿಯಿಂದ ನಿರ್ವಹಿಸಿದ ಪ್ರತಿ ಕಾರ್ಯವು ದೇವರಿಗೆ ಸಲ್ಲುತ್ತದೆ ಎಂದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ ಭೂಮಿ ಮೇಲೆ ಆಚಾರ, ವಿಚಾರ ಧಾರ್ಮಿಕ ಕಾರ್ಯಗಳು ಇನ್ನೂ ಜೀವಂತವಾಗಿರಲು ದೇವಾಲಯಗಳ ಕೊಡುಗೆ ಬಹಳಷ್ಠಿದೆ. ದೇವಾಲಯಗಳು ಮಾನವನಲ್ಲಿ ಒಗ್ಗಟ್ಟನ್ನು ನಿರ್ಮಾಣ ಮಾಡುತ್ತವೆ. ಪ್ರತಿಯೊಬ್ಬರು ಒಂದುಗೂಡಿ ಉತ್ತಮ ಕಾರ್ಯಕ್ಕೆ ಶ್ರಮಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.
ಬಿಜೆಪಿ ಮುಖಂಡರಾದ ಪಲ್ಲವಿ ಸಿ.ಟಿ.ರವಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಶುಭ ಸತ್ಯಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಛಾಯಾದಯಾನಂದ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಶ್ರೀ ದುರ್ಗಾಂಬ ದೇವಿ ಕ್ಷೇಮಾಭಿವೃದ್ಧಿ ಸಂಘಡ ಅಧ್ಯಕ್ಷರಾದ ಕೆ.ಟಿ.ರಂಗಶೆಟ್ಟಿ, ಗೌರಚಾಶ್ಯಕ್ಷ ಕೆ.ಡಿ.ಪುಟ್ಟೇಗೌಡ, ಉಪಾಧ್ಯಕ್ಷರಾದ ಕೆ.ಎಸ್ ಸಿದ್ದೇಗೌಡ, ಖಜಾಂಚಿಗಳಾದ ಕೆ.ಆರ್ ಗುರುಮೂರ್ತಿ, ಕಾರ್ಯದರ್ಶಿಗಳಾದ ಕೆ.ಸಿ ರಾಮೇಗೌಡ, ಶಿಲ್ಪಿ ಮೋಹನ್, ನಿವೃತ್ತ ಡಿ.ಓ.ಎಸ್ಪಿ ಪುರುಷೋತ್ತಮ್, ಸಮಾಜ ಸೇವಕರಾದ ರಾಮಕೃಷ್ಣೇಗೌಡ, ಗ್ರಾಮ ಪಂಚಾಯಿತಿ, ಉಪಾಧ್ಯಕ್ಷ ಕೆ.ಜಿ ಪ್ರವೀಣ್, ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿವಶಂಕರ್ ಶೆಟ್ಟಿ ನೆರೆವೇರಿಸಿದರು.
Shree Durgabadevi new temple dedication