ALSO FEATURED IN

special grants:ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ನಗರದ ಸಮಗ್ರ ಅಭಿವೃದ್ಧಿ

Spread the love

ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ನಗರವನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ಸಮಗ್ರ ಅಭಿವೃದ್ಧಿಪಡಿಸುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು.

ಅವರು ಇಂದು ನಗರದ ಕೋಟೆ ಬಡಾವಣೆ ಬೇಲೂರು ರಸ್ತೆ ನೂತನ ಬಸ್ ನಿಲ್ದಾಣ ಹಾಗೂ ನಗರದ ಆಯ್ದ ಪ್ರಮುಖ ಭಾಗಗಳಲ್ಲಿ ಅತ್ಯುನ್ನತ ಮಾದರಿಯ ೪ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆಯಾದ ಬಳಿಕ ಕಾಮಗಾರಿಗಳನ್ನು ಆರಂಭಿಸಿ ಮೇ ತಿಂಗಳೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಅಭಿವೃದ್ಧಿಪಡಿಸಲು ಗುರಿ ಹೊಂದಲಾಗಿದೆ ಎಂದು ಹೇಳಿದರು.

ನಗರದ ವಿವಿದೆಡೆ ವಿನೂತನ ಮಾದರಿಯಲ್ಲಿ ಹೊರದೇಶದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದು, ಈ ಬಸ್ ನಿಲ್ದಾಣಗಳನ್ನು ಅತ್ಯಾಧುನಿಕ ರೀತಿಯಲ್ಲಿ ಗ್ಲಾಸ್ ಅಳವಡಿಸಿರುವುದರಿಂದ ಇದು ಸರ್ಕಾರದ ಆಸ್ತಿ ಅಲ್ಲ ಸಾರ್ವಜನಿಕರ ಆಸ್ತಿ ಎಂದು ಭಾವಿಸಿ ಹಾನಿಯಾಗದಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು.

ಪಕ್ಷಾತೀತವಾಗಿ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿ ಅಭಿವೃದ್ಧಿಗೆ ಕೈಜೋಡಿಸಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಇಲ್ಲಿ ಒಂದು ಬಸ್ ನಿಲ್ದಾಣ ನಿರ್ಮಾಣ ಮಾಡಬೇಕೆಂಬ ಹಲವು ದಿನಗಳ ಬೇಡಿಕೆ ಇಂದು ಈಡೇರಿದ್ದು, ಸಂಸದ ಜಯರಾಂ ರಮೇಶ್ ನಿಧಿಯಿಂದ ೧೦.೯೨ ಲಕ್ಷ ರೂ ಹಾಗೂ ತಮ್ಮ ಶಾಸಕರ ನಿಧಿಯಿಂದ ೫ ಲಕ್ಷ ರೂ ನಿಧಿಯಲ್ಲಿ ಈ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ ಎಂದರು.

೧೦.೯೦ ಲಕ್ಷ ರೂ ವೆಚ್ಚದಲ್ಲಿ ಹಿರೇಮಗಳೂರಿನಲ್ಲಿ ಬಸ್ ನಿಲ್ದಾಣ, ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆ ಕಲ್ಯಾಣ ನಗರದಲ್ಲಿ ೧೦ ಲಕ್ಷ ರೂ ವೆಚ್ಚದಲ್ಲಿ ಬಸ್ ನಿಲ್ದಾಣ ಹಾಗೂ ಕಣಿವೇ ರುದ್ರೇಶ್ವರ ದೇವಸ್ಥಾನದ ಬಳಿ ಹೌಸಿಂಗ್ ಬೋರ್ಡ್ ಆರನೇ ಹಂತದ ಜನರಿಗೆ ಹಾಗೂ ದಾಸರಹಳ್ಳಿ ಜನರಿಗೆ ಅನುಕೂಲವಾಗುವಂತೆ ೧೦.೯೦ ಲಕ್ಷ ರೂ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದೆಂದರು.

ಈ ನಾಲ್ಕು ಕಾಮಗಾರಿಗಳಿಗೆ ಅಗತ್ಯವಾಗಿ ಬೇಕಾಗಿರುವ ಹಣ ಲಭ್ಯವಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದೆಂದು ತಿಳಿಸಿದ ಅವರು, ಜನಪ್ರತಿನಿಧಿಗಳಾಗಿ ಎಲ್ಲಾ ಜನರ ಆಶಯಗಳಿಗೆ ಸ್ಪಂದಿಸಿ ಪಕ್ಷಾತೀತವಾಗಿ ಕೆಲಸ ಮಾಡಬೇಕಾಗಿರುವುದು ಅಗತ್ಯವಾಗಿದೆ ಎಂದರು.

ನಗರದಲ್ಲಿ ಹಾನಿಯಾಗಿರುವ ರಸ್ತೆಗಳ ದುರಸ್ಥಿಗೆ ಈಗಾಗಲೇ ಕಾಮಗಾರಿ ಆರಂಭಗೊಂಡಿದ್ದು ಅಂಚೆ ಕಚೇರಿ ರಸ್ತೆ, ಒಕ್ಕಲಿಗರ ಸಮುದಾಯ ಭವನದ ರಸ್ತೆ, ಶಂಕರಪುರ ಐದನೇ ಕ್ರಾಸ್ ರಸ್ತೆ ಸೇರಿದಂತೆ ಎಲ್ಲಾ ರಸ್ತೆಗಳನ್ನು ದುರಸ್ಥಿಪಡಿಸಲು ಜಯರಾಂ ರಮೇಶ್ ರವರ ಮನವೊಲಿಸಿ ಅನುದಾನ ತಂದಿರುವುದರ ಜೊತೆಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಚಿಕ್ಕಮಗಳೂರು ನಗರಕ್ಕೆ ಸೀಮಿತವಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಗವನಹಳ್ಳಿಯಿಂದ ರಾಂಪುರದವರೆಗೆ ಉತ್ತಮ ಗುಣಮಟ್ಟದ ವಿದ್ಯುತ್ ದೀಪ ಅಳವಡಿಸಲು ಈಗಾಗಲೇ ಡಿಪಿಆರ್ ಮಾಡಲಾಗಿದೆ. ಮುಂದೆ ಬೇಲೂರು ಬಸ್ ನಿಲ್ದಾಣದಿಂದ ಹಿರೇಮಗಳೂರುವರೆಗೆ ಬೀದಿದೀಪ ಅಳವಡಿಸಲು ಕ್ರಮವಹಿಸಲಾಗುವುದೆಂದು ಹೇಳಿದರು.

ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ನಾವು ಅಧ್ಯಕ್ಷರಾದ ನಂತರ ಸಿ ಟಿ ಬಸ್ ನಿಲ್ದಾಣಗಳನ್ನು ನಿರ್ಮಿಸಬೇಕೆಂದು ಸಾರ್ವಜನಿಕರಿಂದ ಬಹಾಳ ಬೇಡಿಕೆ ಬಂದ ಪರಿಣಾಮ ಇಂದು ಶಾಸಕರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಈಡೇರಿಸಿದ್ದಾರೆ ಎಂದರು.

ಸಾರ್ವಜನಿಕರು ಈ ಅತ್ಯಾಧುನಿಕ ಬಸ್ ನಿಲ್ದಾಣಗಳನ್ನು ತಮ್ಮ ಆಸ್ತಿ ಎಂಬಂತೆ ಬಳಸಿಕೊಳ್ಳಬೇಕೆಂದು ಮನವಿ ಮಾಡಿದ ಅವರು,ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸಿದಾಗ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಬಸ್ ನಿಲ್ದಾಣಗಳು ಇಲ್ಲದೆ ತೊಂದರೆಯಾಗುತ್ತಿತ್ತು. ಇಂದು ನಗರದ ವಿವಿಧ ನಾಲ್ಕು ಭಾಗಗಳಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಗುದ್ದಲ್ಲಿಪೂಜೆ ನೆರವೇರಿಸಿರುವುದು ಶ್ಲಾಘನೀಯ ಎಂದರು.

ನಗರದಲ್ಲಿ ಪರವಾನಗಿ ಇಲ್ಲದೆ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿರುವ ಬಗ್ಗೆ ಗಮನ ಸೆಳೆದಾಗ ಅಂತಹ ಕಟ್ಟಡ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಡಿಎ ಆಯುಕ್ತರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಸಿಡಿಎ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ತನೂಜ್ ನಾಯ್ಡು, ಗ್ರಾಮಸ್ಥರಾದ ದಯಾನಂದ ನಾಯ್ಡು, ವೆಂಕಟೇಧ್ ನಾಯ್ಡು, ನಗರಸಭೆ ಸದಸ್ಯರಾದ ಮಧುಕುಮಾರ್ ರಾಜ್ ಅರಸ್, ಶಾದಬ್, ಆನಂದ, ಸೋಮಣ್ಣ ಹಾಗೂ ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್, ಸಿಡಿಎ ಆಯುಕ್ತರಾದ ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.

Comprehensive development of the city by receiving special grants from the Chief Minister

Facebook
X
WhatsApp
Telegram
Spread the love

ಚಿಕ್ಕಮಗಳೂರು:  ತಾಲ್ಲೂಕಿನಲ್ಲಿ ಸೋರುತ್ತಿರುವ ಶಾಲಾ ಕೊಠಡಿಗಳ ದುರಸ್ಥಿ ಹಾಗೂ ಎಲ್ಲಾ ಶಾಲಾ ಕಟ್ಟಡಗಳು ಸುಭದ್ರವಾಗಿವೆ ಎಂಬ ಬಗ್ಗೆ ಪಟ್ಟಿಮಾಡಿ ಪರಿಶೀಲಿಸಿ…

Spread the love

ಚಿಕ್ಕಮಗಳೂರು: ಎಲ್ಲಾ ವಿಚಾರದ ಬಗ್ಗೆ ಜ್ಞಾನ ಇರುವ ಸರ್ವಜ್ಞನ ರೀತಿ ವರ್ತಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವರ ಪರಮಾಪ್ತ ಲಿಂಗರಾಜು…

Spread the love

ಚಿಕ್ಕಮಗಳೂರು:  ತಾಲ್ಲೂಕಿನಲ್ಲಿ ಸೋರುತ್ತಿರುವ ಶಾಲಾ ಕೊಠಡಿಗಳ ದುರಸ್ಥಿ ಹಾಗೂ ಎಲ್ಲಾ ಶಾಲಾ ಕಟ್ಟಡಗಳು ಸುಭದ್ರವಾಗಿವೆ ಎಂಬ ಬಗ್ಗೆ ಪಟ್ಟಿಮಾಡಿ ಪರಿಶೀಲಿಸಿ…

Spread the love

ಚಿಕ್ಕಮಗಳೂರು: ಎಲ್ಲಾ ವಿಚಾರದ ಬಗ್ಗೆ ಜ್ಞಾನ ಇರುವ ಸರ್ವಜ್ಞನ ರೀತಿ ವರ್ತಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವರ ಪರಮಾಪ್ತ ಲಿಂಗರಾಜು…

[t4b-ticker]
Exit mobile version