ALSO FEATURED IN

ಮೊಬೈಲ್ ಗ್ರಾಹಕರಿಗೆ ಅಡೆತಡೆಗಳಿಲ್ಲದೇ ಸುಲಲಿತ ಸಿಗ್ನಲ್

Spread the love

ಚಿಕ್ಕಮಗಳೂರು:  ಮೊಬೈಲ್ ಗ್ರಾಹಕರಿಗೆ ಅಡೆತಡೆಗಳಿಲ್ಲದೇ ಸುಲಲಿತವಾಗಿ ಸಿಗ್ನಲ್ ಲಭಿಸುವ ಸದುದ್ದೇಶದಿಂದ ನೂತನವಾಗಿ ಬಿ.ಎಸ್.ಎನ್.ಎಲ್. ಟವರ್ ನಿರ್ಮಿಸಿ ಗ್ರಾಮಸ್ಥರಿಗೆ ಅನು ಕೂಲ ಮಾಡಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂ ಜಾರಿ ಹೇಳಿದರು.

ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಸೋಮವಾರ ೮೦ ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಿಎಸ್‌ಎನ್‌ಎಲ್ ಸಂಸ್ಥೆಯ ಸೆಟಲೈಟ್ ಬೇಸಿಕ್ ಮೊ ಬೈಲ್ ಟವರ್ ಸಾರ್ವಜನಿಕರಿಗೆ ಸಮರ್ಪಣೆಗೊಳಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಹೊರಟ್ಟಿ ಗ್ರಾಮಕ್ಕೆ ಸೆಂಟಲೈಟ್ ಟವರ್ ನಿರ್ಮಾಣಗೊಂಡಿದೆ. ಇದರಿಂದ ಮೊಬೈಲ್ ಗ್ರಾಹಕರಿಗೆ ಸಿಗ್ನಲ್‌ಗಳು ಅಡೆತಡೆಗಳಿಲ್ಲದೇ ಮಾತುಕತೆ ಮಾಡಬಹುದು. ಈ ಹಿಂ ದಿನ ಸಂಸದರು ಈ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇದೀಗ ಪೂರ್ಣಗೊಳಿಸಿ ಸಮರ್ಪಿಸಿದ್ದೇವೆ ಎಂದು ತಿಳಿಸಿದರು.

ಹೊರಟ್ಟಿ ಬೆಟ್ಟದ ತುದಿಯಲ್ಲಿರುವ ಗ್ರಾಮವಾದ ಹಿನ್ನೆಲೆ ಮಾಲಿನ್ಯ ರಹಿತ ಹಾಗೂ ಕಲಶವಿಲ್ಲದ ಪರಿ ಸರವನ್ನು ಹೊಂದಿದೆ. ಆಧುನಿಕತೆ ಕಡಿಮೆಯಿದ್ದರೂ ಹಚ್ಚಹಸಿರಿನಂದ ಸ್ವರ್ಗದಂತೆ ಕಂಗೊಳಿಸುತ್ತಿದ್ದು ಮುಂದಿನ ದಿನಗಳಲ್ಲಿ ಆದ್ಯತೆಗನುಸಾರ ಮೂಲಭೂತ ಸೌಕರ್ಯಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಬಿಜೆಪಿ ಮುಖಂಡ ದೀಪಕ್‌ದೊಡ್ಡಯ್ಯ ಮಾತನಾಡಿ ಚುನಾವಣೆ ಮುನ್ನ ಒಂದು ಪಕ್ಷಕ್ಕೆ ಸೀಮಿತರಾಗಿ ರುತ್ತೇವೆ. ಗೆಲುವಿನ ಬಳಿಕ ಸರ್ವಜನರ ಅಭಿವೃದ್ದಿಗೆ ಶ್ರಮಿಸಬೇಕು. ಆ ಸಾಲಿನಲ್ಲಿ ಸಂಸದರು ಜಿಲ್ಲೆಯಾದ್ಯಂ ತ ಪ್ರವಾಸ ಕೈಗೊಂಡು ಕೇಂದ್ರ ಸರ್ಕಾರದ ಸವಲತ್ತನ್ನು ಭೇದಭಾವಿಲ್ಲದೇ ಪೂರೈಸುತ್ತಿದ್ದಾರೆ ಎಂದು ತಿಳಿ ಸಿದರು.

ಈ ಸಂದರ್ಭದಲ್ಲಿ ಬಾಳೂರು ಗ್ರಾ.ಪಂ. ಅಧ್ಯಕ್ಷ ಮಂಜುನಾಥ್, ಸದಸ್ಯ ಸಂದೀಪ್, ಮೂಡಿಗೆರೆ ಬಿಜೆ ಪಿ ಮಂಡಲ ಅಧ್ಯಕ್ಷ ಗಜೇಂದ್ರ, ಕಡವಂತಿ ಗ್ರಾ.ಪಂ. ಸದಸ್ಯ ವಿನೋದ್ ಬೊಗಸೆ, ಮುಖಂಡರುಗಳಾದ ಪರೀಕ್ಷಿತ್‌ಗೌಡ, ಭರತ್, ಮಂಜು ಹಾಗೂ ಗ್ರಾಮಸ್ಥರು ಹಾಜರಿದ್ದರು.

Smooth signal without interruptions for mobile customers

Facebook
X
WhatsApp
Telegram
Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ಕವಿತೆಗಳು ಮಾನಸಿಕವಾಗಿ ಒಂದು ಅನುಭವ ಶೋಧಕ್ಕೆ ದಾರಿ ತೆರೆದು ಕೊಡುತ್ತವೆ; ಹಾಗೆಯೇ ಅವು ಹೃದಯದಲ್ಲಿ ವೈವಿಧ್ಯತೆಯ ಭಾವನೆಗಳನ್ನು ಮೀಟುತ್ತಾ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ಕವಿತೆಗಳು ಮಾನಸಿಕವಾಗಿ ಒಂದು ಅನುಭವ ಶೋಧಕ್ಕೆ ದಾರಿ ತೆರೆದು ಕೊಡುತ್ತವೆ; ಹಾಗೆಯೇ ಅವು ಹೃದಯದಲ್ಲಿ ವೈವಿಧ್ಯತೆಯ ಭಾವನೆಗಳನ್ನು ಮೀಟುತ್ತಾ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

[t4b-ticker]
Exit mobile version