ALSO FEATURED IN

ನಗರ ವ್ಯಾಪ್ತಿಯಲ್ಲಿ ಆಸ್ತಿಗಳ ಸಂಪೂರ್ಣ ದಾಖಲೆಗೊಳಿಸಲು ನಕ್ಷಾ ಯೋಜನೆ ಪರಿಣಾಮಕಾರಿ

Spread the love

ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯಲ್ಲಿ ನಾಗರೀಕರ ಎಲ್ಲಾ ರೀತಿಯ ಆಸ್ತಿಗಳನ್ನು ಸ್ಯಾಟಲೈಟ್ ಮೂಲಕ ಸರ್ವೇ ನಡೆಸಿ ಗಣಕೀಕರಣಗೊಳಿಸಿ ಸಂಪೂರ್ಣ ದಾಖಲೆ ಸಿದ್ದಪಡಿಸುವ ಉದ್ದೇಶದೊಂದಿಗೆ ನೂತನವಾಗಿ ಜಾರಿಗೆ ತರಲಾಗಿರುವ ನಕ್ಷಾ ಯೋಜನೆ ದಾಖಲೆಗಳ ಸಂಗ್ರಹದ ಪರಿಣಾಮಕಾರಿ ಯೋಜನೆಯಾಗಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ತಿಳಿಸಿದರು.

ಇಂದು ನಗರದ ಹನುಮಂತಪ್ಪ ಸರ್ಕಲ್‌ನಲ್ಲಿ ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಚಿಕ್ಕಮಗಳೂರು ನಗರಸಭೆ ವ್ಯಾಪ್ತಿಯಲ್ಲಿ ನಕ್ಷಾ ಯೋಜನೆ ಜಾರಿಗೆ ಬಂದಿದ್ದು, ಭಾರತದ ಸುಮಾರು ೧೦೦ ನಗರಗಳಲ್ಲಿ ಈ ಯೋಜನೆಯನ್ನು ಜಾರಿಮಾಡಲಾಗಿದೆ ಎಂದರು.

ಕರ್ನಾಟಕ ರಾಜ್ಯದಲ್ಲಿ ೧೦ ಸ್ಥಳೀಯ ಸಂಸ್ಥೆಗಳನ್ನು ಆಯ್ಕೆಮಾಡಲಾಗಿದ್ದು, ಇದರಲ್ಲಿ ಚಿಕ್ಕಮಗಳೂರು ನಗರಸಭೆಯೂ ಒಂದಾಗಿದೆ. ಇ-ಸ್ವತ್ತಿನಲ್ಲಿದ್ದರೂ ಈ ಯೋಜನೆಯಡಿ ನಾಗರೀಕರು ತಮ್ಮ ಆಸ್ತಿಗಳನ್ನು ಗಣಕೀಕೃತಗೊಳಿಸಿದಾಗ ಮಾತ್ರ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಈ ಕುರಿತು ಸಂಬಂಧಪಟ್ಟ ಖಾತೆದಾರರಿಗೆ ಎಟಿಎಂ ಮಾದರಿಯ ಕಾರ್ಡನ್ನು ವಿತರಿಸುತ್ತೇವೆ ಎಂದು ಹೇಳಿದರು.

ಸರ್ವೇ ಇಲಾಖೆ ಅಧಿಕಾರಿಗಳು ಮತ್ತು ನಗರಸಭೆಯ ಅಧಿಕಾರಿ ಸಿಬ್ಬಂದಿಗಳು ಸ್ಥಳಕ್ಕೆ ಬಂದಾಗ ಸಾರ್ವಜನಿಕರು ಸ್ವತ್ತಿನ ಸಂಪೂರ್ಣ ವಿವರಗಳ ನೀಡಿ ಸಹಕರಿಸಬೇಕೆಂದು ಮನವಿ ಮಾಡಿದರು. ಈ ಕಾರ್ಯಕ್ಕೆ ಸಂಪೂರ್ಣ ಸಹಕಾರ ದೊರೆತಾಗ ಸರ್ಕಾರ ನೀಡಿದ ೬ ತಿಂಗಳ ಗಡುವಿನೊಳಗೆ ಪೂರ್ಣ ಪ್ರಮಾಣದ ಕೆಲಸ ಆಗುತ್ತದೆ. ವಿಳಂಭ ಮಾಡಿದರೆ ಖಾತೆದಾರರೇ ಹೊಣೆಯಾಗುತ್ತಾರೆಂದು ವಿವರಿಸಿದರು.

ಈ ಸಂಬಂಧ ನಕ್ಷಾ ಯೋಜನೆಯಡಿ ದಾಖಲೆ ಸಂಗ್ರಹಿಸಲು ಸಂಬಂಧಿಸಿದ ಖಾತೆದಾರರಿಗೆ ಸೂಚನೆ ಪತ್ರ ರವಾನಿಸಲಿದ್ದು, ಪತ್ರದಲ್ಲಿ ತಿಳಿಸಿದ ದಿನಾಂಕದಂದು ಮನೆಯಲ್ಲೇ ಇದ್ದು, ಬರುವ ಸಿಬ್ಬಂದಿಗಳಿಗೆ ತಮ್ಮ ಆಸ್ತಿಯ ಪೂರ್ಣ ವಿವರಗಳನ್ನು ಒದಗಿಸುವ ಮೂಲಕ ಯೋಜನೆ ಯಶಸ್ವಿಯಾಗಲು ಬೆಂಬಲ ಅಗತ್ಯ ಎಂದರು.

ಭೂದಾಖಲೆಗಳ ಸಹಾಯಕ ನಿರ್ದೇಶಕ ರುದ್ರೇಶ್ ಮಾತನಾಡಿ, ನಕ್ಷಾ ಯೋಜನೆ ಭಾರತದ ೧೦೦ ನಗರಗಳಲ್ಲಿ ಜಾರಿಗೆ ಬಂದಿದ್ದು, ಇದರಲ್ಲಿ ನಗರಸಭೆಯೂ ಆಯ್ಕೆಯಾಗಿದೆ. ಪ್ರತಿಯೊಂದು ಸ್ವತ್ತುಗಳನ್ನು ಸರ್ವೆ ಮಾಡಿ ಗುರುತಿನ ಚೀಟಿಯಲ್ಲಿ ಆಸ್ತಿಯ ಸಂಪೂರ್ಣ ವಿವರವನ್ನು ಲಗತ್ತಿಸಿ ಸಂಬಂಧಪಟ್ಟವರಿಗೆ ವಿತರಿಸುತ್ತೇವೆಂದು ಹೇಳಿದರು.

ನಗರಸಭೆ ವ್ಯಾಪ್ತಿಯಲ್ಲಿ ಬರುವ ಪ್ರತೀ ಬಿಲ್ಡಿಂಗ್, ರಸ್ತೆ, ವಿದ್ಯುತ್ ಕಂಬ, ಒಳ ಚರಂಡಿ, ಸ್ಮಶಾನ, ಕೆರೆ ಸೇರಿದಂತೆ ಎಲ್ಲವುಗಳನ್ನು ಸರ್ವೆ ಮಾಡಿ ಡಿಜಿಟಲೀಕರಣಗೊಳಿಸಿ ಮಾಲೀಕರ ಹೆಸರು ಸಹಿತ ಸಂಪೂರ್ಣ ಮಾಹಿತಿಯುಳ್ಳ ೩ಡಿ ಫಿಲಂನ್ನು ವಿತರಿಸುತ್ತೇವೆ ಎಂದರು. ನಗರಸಭೆ ವ್ಯಾಪ್ತಿಯ ನಿವಾಸಿಗಳಿಗೆ ತಮ್ಮ ಮನೆ, ನಿವೇಶನ ಸೇರಿದಂತೆ ಸ್ವತ್ತುಗಳ ಎಲ್ಲಾ ಸಂಪೂರ್ಣ ದಾಖಲಾತಿಗಳನ್ನು ಒದಗಿಸಲು ಈ ಯೋಜನೆ ಪರಿಣಾಮಕಾರಿಯಾಗಲಿದೆ ಎಂದು ಹೇಳಿದರು.

ಸರ್ವೇ ಕಾರ್ಯದಲ್ಲಿ ನಗರಾಭಿವೃದ್ಧಿ ಇಲಾಖೆ, ಸರ್ವೇ ಇಲಾಖೆ, ಸರ್ವೇ ಆಫ್ ಇಂಡಿಯಾ ಸಹಿತ ಒಟ್ಟು ೫ ಇಲಾಖೆಗಳು ಈ ಕಾರ್ಯ ನಡೆಸಲು ನಿಯೋಜನೆಗೊಂಡಿದ್ದು, ಮುಂದಿನ ೬ ತಿಂಗಳ ಒಳಗೆ ಈ ಕಾರ್ಯ ಅಂತಿಮಗೊಳಿಸುವಂತೆ ಗಡುವು ನೀಡಿದ್ದಾರೆಂದು ವಿವರಿಸಿದರು.

ಈ ಸಂದರ್ಭದಲ್ಲಿ ಭೂ ದಾಖಲೆಗಳ ಉಪನಿರ್ದೇಶಕರಾದ ಲೋಹಿತ್ ಮೇಲ್ವಿಚಾರಕರಾದ ಗೀತಾ, ಧರ್ಮಪಾಲ್, ಪ್ರಕಾಶ್, ಅಧೀಕ್ಷಕ ನಂಜುಂಡಪ್ಪ, ಕಲ್ಲೇಶಪ್ಪ ಸೇರಿದಂತೆ ಎಲ್ಲಾ ಭೂಮಾಪಕರು, ನಗರಸಭೆ ಇಂಜಿನಿಯರ್ ಲೋಕೇಶ್, ಕಂದಾಯ ವಿಭಾಗದ ರಾಜಸ್ವ ನಿರೀಕ್ಷಕ ಶಿವಾನಂದ್ ಉಪಸ್ಥಿತರಿದ್ದರು.

The mapping project is effective in providing complete documentation of properties within the city limits.

Facebook
X
WhatsApp
Telegram
Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ಕವಿತೆಗಳು ಮಾನಸಿಕವಾಗಿ ಒಂದು ಅನುಭವ ಶೋಧಕ್ಕೆ ದಾರಿ ತೆರೆದು ಕೊಡುತ್ತವೆ; ಹಾಗೆಯೇ ಅವು ಹೃದಯದಲ್ಲಿ ವೈವಿಧ್ಯತೆಯ ಭಾವನೆಗಳನ್ನು ಮೀಟುತ್ತಾ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ಕವಿತೆಗಳು ಮಾನಸಿಕವಾಗಿ ಒಂದು ಅನುಭವ ಶೋಧಕ್ಕೆ ದಾರಿ ತೆರೆದು ಕೊಡುತ್ತವೆ; ಹಾಗೆಯೇ ಅವು ಹೃದಯದಲ್ಲಿ ವೈವಿಧ್ಯತೆಯ ಭಾವನೆಗಳನ್ನು ಮೀಟುತ್ತಾ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

[t4b-ticker]
Exit mobile version