ALSO FEATURED IN

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾಗಿ ಕೆ.ಎಸ್. ಶಾಂತೇಗೌಡ ಆಯ್ಕೆ

Spread the love

ಚಿಕ್ಕಮಗಳೂರು: ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾಗಿ ಗುತ್ತಿಗೆದಾರರಾದ ಕೆ.ಎಸ್. ಶಾಂತೇಗೌಡ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಮಾಡಲಾಗಿದೆ. ಇಂದು ನಗರದ ಕನಕ ಭವನದಲ್ಲಿ ನಡೆದ ಜಿಲ್ಲಾ ಕುರುಬರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಸಂಘದಲ್ಲಿ ಹಾಲಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆ.ಎಸ್. ಶಾಂತೇಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಶಾಂತೇಗೌಡರು ಸಮಾಜದ ಕೆಲಸ ಮಾಡಿಕೊಂಡು ಬರುತ್ತಿದ್ದು, ಈಗ ನನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆಮಾಡಿರುವುದರಿಂದ ಉತ್ತಮವಾಗಿ ಸಮುದಾಯದ ಕೆಲಸ ಮಾಡಲು ಗುರಿ ಹೊಂದಿದ್ದೇನೆ ಎಂದರು.

ಕನಕ ಭವನಕ್ಕೆ ಕಾಂಪೌಂಡ್ ನಿರ್ಮಾಣ, ಅಡುಗೆ ಮನೆ ಮುಂತಾದವುಗಳ ನಿರ್ಮಾಣದ ಜೊತೆಗೆ ಕುರುಬ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಕಳೆದ ಹತ್ತಾರು ವರ್ಷಗಳಿಂದ ಕುರುಬರ ಸಂಘದ ಅಧ್ಯಕ್ಷರಾಗಿದ್ದ ಕೆ.ಎಂ. ಮಂಜುನಾಥ್ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ಸಹಕರಿಸಿದ ಎಲ್ಲಾ ಸರ್ವ ಸದಸ್ಯರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರುಗಳಾದ ಕೆ.ಎ. ಗೋಪಾಲಕೃಷ್ಣ, ಕೆ.ವಿ. ಮಂಜುನಾಥ, ಎನ್.ಹೆಚ್. ಮೋಹನ್, ರೇಖಾಹುಲಿಯಪ್ಪಗೌಡ, ಡಿ.ಸಿ. ಪುಟ್ಟೇಗೌಡ, ಹೆಚ್.ಪಿ ಮಂಜೇಗೌಡ, ಲಾಯರ್ ಮಂಜುನಾಥ, ರಾಮಣ್ಣ, ಹೆಚ್.ಎಸ್. ಪುಟ್ಟೇಗೌಡ, ದೇವರಹಳ್ಳಿ ಡಿ.ಎಂ ಜನಾರ್ಧನ, ಸಿದ್ದೇಗೌಡ, ಬೀರೇಗೌಡ ದೇವೇಗೌಡ, ರೇವಣ್ಣ, ಡಿ.ಎಸ್. ಚಂದ್ರೇಗೌಡ, ಭದ್ರೇಗೌಡ, ಧರ್ಮೇಶ್, ತ್ರಿಭುವನ್, ಪುಷ್ವರಾಜ್, ರಾಮಣ್ಣ, ಲಕ್ಷ್ಮೀಕಾಂತ್, ಜಗಧೀಶ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

K.S. Shantegowda elected as the President of the Jillā kurubara saṅgha

Facebook
X
WhatsApp
Telegram
Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

Spread the love

ಚಿಕ್ಕಮಗಳೂರು: ಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ೧೧ ವರ್ಷದ ಪೀಳಿಗೆಯು ಕೇಂದ್ರದಲ್ಲಿ ಒಂದೇ ಒಂದು ಭ್ರಷ್ಟಾಚಾರವಿಲ್ಲದ ವಿಶ್ವಾಸಾರ್ಹವಾದ, ಒಳ್ಳೆಯ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

Spread the love

ಚಿಕ್ಕಮಗಳೂರು: ಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ೧೧ ವರ್ಷದ ಪೀಳಿಗೆಯು ಕೇಂದ್ರದಲ್ಲಿ ಒಂದೇ ಒಂದು ಭ್ರಷ್ಟಾಚಾರವಿಲ್ಲದ ವಿಶ್ವಾಸಾರ್ಹವಾದ, ಒಳ್ಳೆಯ…

[t4b-ticker]
Exit mobile version