ALSO FEATURED IN

ರೈತ-ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಿ ಮಲೆನಾಡಿನ ಜನಜೀವನ ಉಳಿಸುವಂತೆ ಮನವಿ

Spread the love

ಚಿಕ್ಕಮಗಳೂರು: ಚಿಕ್ಕಮಗಳೂರು ಕಂದಾಯ, ಅರಣ್ಯ , ಡೀಮ್ಡ್, ಒತ್ತುವರಿ, ಭೂ ಮಂಜೂರಾತಿ ಸೇರಿದಂತೆ ರೈತ-ಅರಣ್ಯ ಇಲಾಖೆ ಸಂಘರ್ಷ ತಪ್ಪಿಸಿ ಮಲೆನಾಡಿನ ಜನಜೀವನ ಉಳಿಸುವಂತೆ ಆಗ್ರಹಿಸಿ ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ರೈತ ಸಮಾವೇಶದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಯಿತು.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಕ್ಷಾತೀತವಾಗಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಕೊಪ್ಪ, ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ಸಕಲೇಶಪುರ ತಾಲೂಕಿನಿಂದ ಸಹಸ್ರಾರು ಜನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಹಸಿರು ಸಾಲು ಹೊದ್ದು ಮಹಿಳೆಯರು ಸೇರಿದಂತೆ ಸಹಸ್ರಾರು ರೈತರು ನಗರದ ಹನುಮಂತಪ್ಪ ವೃತ್ತದಿಂದ ಎಂಜಿ ರಸ್ತೆ ಮೂಲಕ ಆಜಾದ್ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಲೆನಾಡಿನ ರೈತರ ಸಮಸ್ಯೆಗಳ ಬಗ್ಗೆ ಹೋರಾಟ ಸಮಿತಿ ಅಧ್ಯಕ್ಷ ಎಸ್.ವಿಜಯ್‌ಕುಮಾರ್ ಎಳೆಎಳೆಯಾಗಿ ಬಿಡಿಸಿಟ್ಟರು.

ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ ಜಿಲ್ಲೆಯ ದೊಡ್ಡ ಬೆಳೆಗಾರರು ಭೂ ಒತ್ತುವರಿಗಾಗಿ ಹೋರಾಟ ಮಾಡುತ್ತಿದ್ದಾರೆ ಎಂಬುದು ರಾಜ್ಯ ಮಟ್ಟದ ಅಕಾರಿಗಳ ಧೋರಣೆಯಾಗಿದೆ. ಆದರೆ, ಇಲ್ಲಿ ಶೇ.೯೦ ರಷ್ಟು ಸಣ್ಣ ಬೆಳೆಗಾರು ೧-೫ ಎಕರೆ ಸಾಗುವಳಿ ಮಾಡಿ ಹಕ್ಕುಪತ್ರಕ್ಕೆ ಕಾಯುತ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಅರಣ್ಯ ಸಚಿವರ ಸಮ್ಮುಖದಲ್ಲಿ ೫ ಮಂದಿ ಜಿಲ್ಲೆಯ ಶಾಸಕರು ಸಭೆ ನಡೆಸಿದ್ದೇವೆ. ಅರಣ್ಯ ಕಾಯಿದೆಗೆ ತಿದ್ದುಪಡಿ ತರುವ ಬಗ್ಗೆ, ೪(೧) ಅಸೂಚನೆ ಪುನರ್ ಪರಿಶೀಲನೆ, ಎಫ್‌ಎಸ್‌ಒ ಗಳ ವರದಿ ಅಂತಿಮ, ಇದಕ್ಕೆ ಡಿಸಿಎಫ್ ಸಹಿ ಬೇಕು ಎಂಬುದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದೇವೆ. ಎಫ್‌ಎಸ್‌ಒ ಗಳು ಸ್ಥಳ ಪರಿಶೀಲನೆ ಮಾಡುವಾಗ ಒತ್ತವರಿಯಾಗದೆ ಉಳಿದಿರುವ ಭೂಮಿಯನ್ನು ಎ ಬ್ಲಾಕ್ ಎಂತಲೂ, ಒತ್ತುವರಿಯಾಗಿ ಗೊಂದಲವಿರುವ ಭೂಮಿಯನ್ನು ಬಿ ಬ್ಲಾಕ್ ಎಂದು ಪರಿಗಣಿಸಿ ಈ ಬಗ್ಗೆ ಸುಪ್ರೀಂ ಕೋರ್ಟಿಗೆ ವರದಿ ನೀಡಬೇಕು ಎಂಬುದನ್ನು ಮನವರಿಕೆ ಮಾಡಿದ್ದೇವೆ ಎಂದರು.

ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿದರು. ಕಾಫಿಬೆಳೆಗಾರರ ಸಂಘದ ಬಾಲಕೃಷ್ಣ ನಿರೂಪಿಸಿದರು. ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಶಾಸಕ ಎಂ.ಪಿ.ಕುಮಾರಸ್ವಾಮಿ, ಗಾಯತ್ರಿಶಾಂತೇಗೌಡ, ಮುಖಂಡರಾದ ಹಳಸೆ ಶಿವಣ್ಣ, ಜಗನ್ನಾಥ್ ಅತ್ತಿಕಟ್ಟೆ, ಎಚ್.ಎಚ್.ದೇವರಾಜ್, ಡಾ.ಕೃಷ್ಣೇಗೌಡ, ರಾಧಕೃಷ್ಣ ವಿವಿಧ ರೈತ, ದಲಿತ, ಕನ್ನಡ ಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ ಶಾಸಕಾಂಗ, ಕಾರ್ಯಾಂಗ ಇದ್ದಾಗ್ಯೂ ಎಲ್ಲದಕ್ಕೂ ನ್ಯಾಯಾಂಗದ ಮೇಲೆ ಬೊಟ್ಟು ಮಾಡುವ ಕೆಲಸ ನಡೆಯುತ್ತಿದೆ. ಶಾಸಕಾಂಗ ಹೇಳಿದ್ದನ್ನು ಕಾರ್ಯಾಂಗ ಮಾಡದಿರುವುದೇ ಸಮಸ್ಯೆಗಳಿಗೆ ಕಾರಣ ಎಂದರೆ ತಪ್ಪಲ್ಲ. ಒತ್ತುವರಿ ಭೂಮಿ ಗುತ್ತಿಗೆ ನೀಡುವ ಬಿಲ್ ಪಾಸ್ ಮಾಡಿದ್ದೇವೆ ಅದನ್ನು ಅನುಷ್ಠಾನ ಗೊಳಿಸುವ ಕೆಲಸ ಎಲ್ಲ ಶಾಸಕರ ಮೇಲಿದೆ. ಸದನದಲ್ಲಿ ಎಲ್ಲರೂ ಪಕ್ಷಾತೀತವಾಗಿ ಜಿಲ್ಲೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ ಎಂದರು.

ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ ಕೆಂದ್ರಕ್ಕೆ ಸಂಬಂಸಿದ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಬಳಿ ನಿಯೋಗ ಕರೆದೊಯ್ದು ಚರ್ಚೆ ಮಾಡಿಸುತ್ತೇನೆ. ಸದ್ಯದಲ್ಲೇ ನಡೆಯಲಿರುವ ದಿಶಾ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿ ದರು.

ಶಾಸಕ ಸಿ.ಟಿ.ರವಿ ಮಾತನಾಡಿ ನಮೂನೆ ೫೭ ರಲ್ಲಿ ಕೃಷಿ ಜತೆಗೆ ತೋಟಗಾರಿಕೆ ಬೆಳೆಯ ಸಾಗುವಳಿಯನ್ನು ಸೇರಿಸಿ ತಿದ್ದುಪಡಿ ತಂದಲ್ಲಿ ಈಗಿರುವ ಸಮಸ್ಯೆ ಪರಿಹಾರವಾಗಲಿದೆ. ನಮೂನೆ ೫೦-೫೩ ರಲ್ಲಿ ಆಗಿರುವ ಅಕ್ರಮವನ್ನು ಜಿಲ್ಲಾಕಾರಿಗಳು ಕಾಲಮಿತಿಯಲ್ಲಿ ತನಿಖೆಮಾಡಿ ನ್ಯಾಯಯುತವಾದದನ್ನು ಮಂಜೂರು ಮಾಡಿ, ಅಕ್ರಮವಾದುದನ್ನು ರದ್ದುಪಡಿಸಬಹುದು.

ಡೀಮ್ಡ್ ಫಾರೆಸ್ಟ್ ಎಂಬ ಪರಿಕಲ್ಪನೆ ಒಪ್ಪುವಂತದಲ್ಲ, ಇದನ್ನು ಅರಣ್ಯ ಎಂದು ಪರಿಗಣಿಸುವಂತಿಲ್ಲಎಂದು ಹೈಕೋರ್ಟ್ ಹೇಳಿದೆ. ನ್ಯಾಯಾಲಯದ ಆದೇಶ ಇಟ್ಟುಕೊಂಡು ಈಗಿರುವ ಅಡೆತಡೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಎಫ್‌ಎಸ್‌ಒ ಗಳು ಅರೆ ನ್ಯಾಯಾಶರಾಗಿರುತ್ತಾರೆ. ಅವರ ವರದಿಯೇ ಅಂತಿಮವಾಗಬೇಕು. ಡಿಸಿಎಫ್ ಸಹಿ ಇರಬೇಕು ಎಂಬುದನ್ನು ರದ್ದುಪಡಿಸುವ ಬಗ್ಗೆ ಸದನದಲ್ಲಿ ಚರ್ಚೆ ನಡೆಸೋಣ ಎಂದರು

ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ ಅರಣ್ಯ ಕಾಯಿದೆಗಳನ್ನು ಮಲೆನಾಡಿನ ರೈತರ ಮೇಲೆ ಹೇರಲಾಗುತ್ತಿದೆ. ಮೂಲ ಸೌಕರ್ಯ ಮತ್ತಿತರೆ ಉದ್ದೇಶಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತಂದಿರುವಾಗ ಅರಣ್ಯ ಕಾಯಿದೆಗೆ ಏಕೆ ತಿದ್ದುಪಡಿ ತರಬಾರದು ಎಂದು ಕೇಳಿದ್ದೇವೆ. ನಮೂನೆ ೫೭ ರಲ್ಲಿ ಪ್ಲಾಂಟೇಶನ್ ಕೃಷಿಗೆ ಅವಕಾಶ ನೀಡದಿದ್ದರೆ ಲೀಸ್‌ಗಾದರೂ ನೀಡಬೇಕು ಎಂದು ಸಚಿವರಲ್ಲಿ ಒತ್ತಾಯಿಸಿದ್ದೇವೆ. ಮಲೆನಾಡಿನ ಡೀಮ್ಡ್ ಫಾರೆಸ್ಟ್ ಪ್ರಸ್ತಾಪ ವಾಪಸ್ಸು ಪಡೆಯಬೇಕು. ಅರಣ್ಯ ಮಂತ್ರಿಗಳು, ಮೇಲಾಕಾರಿಗಳ ಆದೇಶವನ್ನು ಜಿಲ್ಲೆಯ ಅರಣ್ಯ ಅಕಾರಿಗಳು ಪಾಲಿಸಬೇಕು ಇಲ್ಲದಿದ್ದರೆ ನಮ್ಮ ಹೋರಾಟ ಇದ್ದೇ ಇದೆ ಎಂದರು.

ಶಾಸಕ ನಯನ ಮೋಟಮ್ಮ ಮಾತನಾಡಿ ಡೀಮ್ಡ್ ರೀ ಸರ್ವೆ ಮಾಡಬೇಕು. ನಮೂನೆ ೫೦-೫೩ ರ ಅರ್ಜಿ ವಿಚಾರದಲ್ಲಿ ದಾಖಲಾತಿ ಸರಿಯಿದ್ದರೆ ಅರ್ಜಿದಾರರ ಪರ ನಾನಿರುತ್ತೇನೆ ಅವರಿಗೆ ಹಕ್ಕುಪತ್ರ ಕೊಡಿಸುತ್ತೇನೆ.ಲೀಸ್ ಅರ್ಜಿ ಸಲ್ಲಿಸುವ ಅವ ವಿಸ್ತರಣೆಗೆ ಅರಣ್ಯ ಸಚಿವರಲ್ಲಿ ಮನವಿ ಮಾಡಿದ್ದೇವೆ ಎಂದರು.

Appeal to save lives of people in the mountainous region by avoiding conflict between farmers and the forest department

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version