ALSO FEATURED IN

ಹಿರೇಮಗಳೂರಿನಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಅದ್ಧೂರಿ ಹುಟ್ಟುಹಬ್ಬ ಆಚರಣೆ

Spread the love

ಚಿಕ್ಕಮಗಳೂರು: ಬಡವರ ಬಂಧು ದೀನ ದಲಿತರ ಆಶಾಕಿರಣ, ಜನಪ್ರಿಯ ಶಾಸಕ ಹೆಚ್.ಡಿ. ತಮ್ಮಯ್ಯ ಅವರ ೫೬ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ಅವರ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು ಶಾಸಕರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿ ಸಿಹಿ ತಿನಿಸಿ ಸಂಭ್ರಮಿಸಿದರು.

ಇಂದು ಬೆಳಗ್ಗೆ ನೂರಾರು ಸಂಖ್ಯೆಯಲ್ಲಿ ಸೇರಿದ ಶಾಸಕರ ಅಭಿಮಾನಿಗಳು ಶಾಸಕ ತಮ್ಮಯ್ಯ ಅವರ ಹುಟ್ಟೂರಾದ ಹಿರೇಮಗಳೂರಿನಲ್ಲಿ ಪಟಾಕಿ ಸಿಡಿಸಿ ಮೆರವಣಿಗೆ ಮೂಲಕ ಬೃಹತ್ ಹಾರವನ್ನು ಜೆಸಿಬಿ ಮೂಲಕ ಹಾಕಿ ಶುಭಾಶಯ ಕೋರಿದರು.

ಇದರ ಅಂಗವಾಗಿ ಹಿರೇಮಗಳೂರಿನ ಕೋದಂಡರಾಮ ಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಿದ್ದ ಗ್ರಾಮಸ್ಥರು ಶಾಸಕರಿಗೆ ಮುಂದೆ ಇನ್ನಷ್ಟು ಭವಿಷ್ಯ ಉಜ್ವಲಗೊಳ್ಳುವ ಜೊತೆಗೆ ಆಯುರ್ ಆರೋಗ್ಯ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದರು.

ಪತ್ನಿ ಮಂಗಳ ಅವರ ಜೊತೆ ಆಗಮಿಸಿದ ಶಾಸಕ ಹೆಚ್.ಡಿ. ತಮ್ಮಯ್ಯ ಅವರನ್ನು ಹಿರೇಮಗಳೂರು ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭ ಸ್ವಾಗತದೊಂದಿಗೆ ಭರಮಾಡಿಕೊಂಡರು. ಶಾಲಾ ಮಕ್ಕಳು ಆರತಿ ಮಾಡುವ ಮೂಲಕ ಹುಟ್ಟುಹಬ್ಬಕ್ಕೆ ಕಳೆಗಟ್ಟಿಸಿದರು.

ರಾಜ್ಯಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬಿರುವ ಈ ಸಂದರ್ಭದಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವುದರ ಜೊತೆಗೆ ಸರ್ಕಾರದ ಜನಪರ ಸೌಲಭ್ಯಗಳನ್ನು ಬಡವರು, ಕೂಲಿಕಾರ್ಮಿಕರ, ಶೋಷಿತರ ಮನೆಬಾಗಿಲಿಗೆ ತಲುಪಿಸುವಲ್ಲಿ ಕ್ರಮವಹಿಸುತ್ತಿರುವುದು ಶ್ಲಾಘನೀಯ.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ಅಭಿಮಾನಿಗಳಾದ ಹಿರೇಮಗಳೂರು ರಾಮಚಂದ್ರ, ಜಯರಾಜ್ ಅರಸ್, ರಾಜು, ಜಗದೀಶ್, ಗಂಗಾಧರ್ ಸೇರಿದಂತೆ ಶಾಲಾ ಮುಖ್ಯೋಪಾದ್ಯಾಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಾಸಕರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.

MLA H.D. Thammayya’s birthday celebration in Hiremagaluru

 

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version