ALSO FEATURED IN

ಶಿರವಾಸೆ ಮುಳ್ಳೇಗೌಡರು ಮಾದರಿ ಗ್ರಾಮಕ್ಕೆ ನಾಂದಿ

Spread the love

ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಜನರ ಬದುಕು ಇವುಗಳಿಗೆ ಆದ್ಯತೆಯನ್ನು ಕೊಡುವ ಸರ್ಕಾರ ಮತ್ತು ಜನಪ್ರತಿನಿಧಿ ನೆರವೇರಿಸಿದಾಗ ಮಾತ್ರ ಅಂತವರು ಜನಮಾನಸದಲ್ಲಿ ಉಳಿಯುತ್ತಾರೆಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು.

ಅವರು ಇಂದು ಶಿರವಾಸೆ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ, ಸಂಸ್ಥಾಪಕರ ದಿನಾಚರಣೆ ಶಿವೈಕ್ಯ ಎಸ್.ಬಿ. ಮುಳ್ಳೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಶಾಲೆಯ ನೂತನ ಬಸ್ಸನ್ನು ಉದ್ಘಾಟಿಸಿ ಮಾತನಾಡಿ ಇತಿಹಾಸ ಇರುವ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ವಿವೇಕಾನಂದ ವಿದ್ಯಾಸಂಸ್ಥೆ ಇಂದು ಮಾದರಿಯಾಗಿದೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ತಾವು ಕನ್ನಡಪರ ಹೋರಾಟಗಳಲ್ಲಿಯೂ ಭಾಗವಹಿಸಿದ್ದ ಪರಿಣಾಮ ಸಾರ್ವಜನಿಕ ಬದುಕಿನಲ್ಲಿ ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದರು.

ಶಿರವಾಸೆ ಮುಳ್ಳೇಗೌಡರು ಶಿರವಾಸೆಯನ್ನು ಮಾದರಿ ಗ್ರಾಮವನ್ನಾಗಿ ಮಾಡಿ, ಜನರ ಬದುಕಿಗೆ ಅಗತ್ಯವಾಗಿ ಬೇಕಾಗಿದ್ದ ಆಸ್ಪತ್ರೆ, ಸೊಸೈಟಿ, ಗ್ರಾಮ ಪಂಚಾಯಿತಿ, ಶಾಲೆಯನ್ನು ತೆರೆದು ಶಿಕ್ಷಣಕ್ಕೆ ಆದ್ಯತೆ ನೀಡಿದ ಪರಿಣಾಮ ಅವರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣ ಎಂದು ಬಣ್ಣಿಸಿದರು.
ವೀರಶೈವ ಮಠಗಳು ಉಚಿತ ಶಿಕ್ಷಣ, ಉಚಿತ ಅನ್ನದಾಸೋಹ ನಡೆಸುವ ಮೂಲಕ ಸಮಾಜದಲ್ಲಿ ಮುಂಚೂಣಿಯಲ್ಲಿವೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ೬೦ ಲಕ್ಷ ರೂ ವೆಚ್ಚದಲ್ಲಿ ಶಾಲೆಗೆ ವಾಹನ ಕೊಡುಗೆ ನೀಡಿದ್ದಾರೆ ಎಂದರು.

ಎಲ್ಲಾ ವರ್ಗದ ನೌಕರರು, ವ್ಯಾಪಾರಸ್ಥರು ಪ್ರತಿಭಟನೆ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ರೈತರು ಕೃಷಿ ಕಾರ್ಯವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರೆ ಪ್ರಪಂಚ ಹಸಿವಿನಿಂದ ಸಾಯಬೇಕಾಗುತ್ತದೆ. ಇದನ್ನು ಮನಗಂಡು ಅನ್ನದಾತ ಬಂಧುಗಳಿಗೆ ಸರ್ಕಾರಗಳು ಶಕ್ತಿ ತುಂಬುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಶಿಕ್ಷಣ ಹುಲಿಯ ಹಾಲಿದ್ದಂತೆ ಎಂದು ಹೇಳಿದ್ದಾರೆ. ಶ್ರಮಪಟ್ಟು ವಿದ್ಯಾರ್ಥಿಗಳು ಶಿಕ್ಷಣವನ್ನು ಕಲಿತಾಗ ಮಾತ್ರ ಜೀವನದಲ್ಲಿ ಹುಲಿಮರಿಗಳಾಗಿ ಘರ್ಜಿಸುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲ್ಲೂಕಿನಲ್ಲಿ ನಿವೇಶನ ರಹಿತರಿಗೆ ಕಳೆದ ೨೦ ವರ್ಷಗಳಿಂದ ಮನೆ, ನಿವೇಶನ ನೀಡಲಾಗಿಲ್ಲ ಎಂದು ವಿಷಾಧಿಸಿದ ಅವರು, ಅದಕ್ಕಾಗಿ ಪ್ರತೀ ಪಂಚಾಯಿತಿಯಲ್ಲಿ ೫ ಎಕರೆ ಜಾಗವನ್ನು ಗುರ್ತಿಸಿ ಬಡವರಿಗೆ ಇನ್ನೊಂದು ವರ್ಷದಲ್ಲಿ ಸರ್ಕಾರದ ವತಿಯಿಂದ ಮನೆ, ನಿವೇಶನ ನೀಡುವುದಾಗಿ ಭರವಸೆ ನೀಡಿದರು.

ಸಂಸ್ಥೆಯ ಅಧ್ಯಕ್ಷ ಬಿ.ಎಂ. ಭೋಜೇಗೌಡ ಮಾತನಾಡಿ, ದಾನಿಗಳು ಸಹಾಯ ಹಸ್ತ ನೀಡಿದರೆ ಶಿಕ್ಷಣ ಸಂಸ್ಥೆ ಯಶಸ್ವಿಯಾಗಿ ನಡೆಯುತ್ತದೆ ಎಂಬುದಕ್ಕೆ ವಿವೇಕಾನಂದ ವಿದ್ಯಾಸಂಸ್ಥೆ ಉದಾಹರಣೆಯಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ವ್ಯಾಸಂಗ ಮಾಡಿದ ಶಾಲೆಗೆ ಧನಸಹಾಯ ಮಾಡಿದರೆ ಸಂಸ್ಥೆ ಇನ್ನಷ್ಟು ಉತ್ತಮವಾಗಿ ಬೆಳೆಯುತ್ತದೆ ಎಂದು ಹೇಳಿದರು.

ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ದೆವಣ್ಣಗೌಡ ಮಾತನಾಡಿ ೫೦ ವರ್ಷಗಳ ಹಿಂದೆ ಎಸ್.ಬಿ ಮುಳ್ಳೇಗೌಡ ರವರ ನೇತೃತ್ವದಲ್ಲಿ ದಾನಿಗಳ ಸಹಾಯದಿಂದ ವಿದ್ಯಾಸಂಸ್ಥೆ ಸ್ಥಾಪನೆ ಮಾಡಲಾಯಿತು, ಸಾವಿರಾರು ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸವನ್ನು ಪಡೆದಿದ್ದಾರೆ ಎಂದರು.

ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ದೆವಣ್ಣಗೌಡ ಮಾತನಾಡಿದರು. ಕಾರ್ಯದರ್ಶಿ ಶ್ರೀಕಾಂತ್ ಸ್ವಾಗತಿಸಿದರು. ವೇದಿಕೆಯಲ್ಲಿ ಬೆಂಗಳೂರಿನ ಮಹಾಚಂದ್ರ ಪ್ರತಿಷ್ಠಾನ ಅಧ್ಯಕ್ಷರಾದ ಬಿ.ಎಂ. ರವಿಶಂಕರ್, ಸೋಮಶೇಖರ್, ಕೆ.ಆರ್. ಅಣ್ಣೇಗೌಡ, ಶ್ರೀಕಾಂತ್ ಶೆಟ್ಟಿ, ಹೆಚ್.ಪಿ. ಮಂಜೇಗೌಡ, ವೆಂಕಟಶೆಟ್ಟಿ, ಲೀಲಾ ಬಾಬುಪೂಜಾರಿ, ಶಾರದಾ ಎಸ್ ಶೆಟ್ಟಿ, ರಘುನಾಥ್, ಮಲ್ಲೇಶ್, ನರೇಂದ್ರ, ಪ್ರಭುಲಿಂಗಶಾಸ್ತ್ರಿ, ಬಿ.ಎನ್ ವಿಶ್ವನಾಥ್, ವಾಸುಪೂಜಾರಿ, ರಾಜು, ರಮೇಶ್, ಯೋಗೀಶ್, ಆದರ್ಶ್, ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು. ವಿಶ್ವನಾಥ್ ಸ್ವಾಗತಿಸಿ, ಪ್ರಸನ್ನ ನಿರೂಪಿಸಿ, ಸುಭಾಶ್ ವಂದಿಸಿದರು.

Shiravase Mullegowdar was the beginning of a model village

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version