ALSO FEATURED IN

ನಗರಸಭೆ ನೂತನ ಅಧ್ಯಕ್ಷರಾಗಿ ಬಿ.ಶೀಲಾ ದಿನೇಶ್ ಅವಿರೋಧವಾಗಿ ಆಯ್ಕೆ

Spread the love

ಚಿಕ್ಕಮಗಳೂರುಎ:  ನಗರಸಭೆ ನೂತನ ಅಧ್ಯಕ್ಷರಾಗಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ೧೫ ನೇ ವಾರ್ಡ್‌ನ ಬಿ.ಶೀಲಾ ದಿನೇಶ್ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಆಂತರಿಕ ಒಪ್ಪಂದದ ಪ್ರಕಾರ ೧೦ ತಿಂಗಳ ಅಧಿಕಾರದ ನಂತರ ಸುಜಾತ ಶಿವಕುಮಾರ್ ಅವರು ರಾಜೀನಾಮೆ ನಿಡಿದ್ದ ಹಿನ್ನೆಲೆಯಲ್ಲಿ ಶನಿವಾರ ನೂತನ ಅಧ್ಯಕ್ಷರ ಆಯ್ಕೆಗೆ ನಗರಸಭೆ ಸಭಾಂಗಣದಲ್ಲಿ ಚುನಾವಣೆ ನಡೆಯಿತು.

ಜೆಡಿಎಸ್ ಬೆಂಬಲದೊಂದಿಗೆ ೧೫ ನೇ ವಾರ್ಡ್‌ನಿಂದ ಪಕ್ಷೇತರ ಸದಸ್ಯೆಯಾಗಿ ಆಯ್ಕೆಯಾಗಿ ಬಂದಿರುವ ಶೀಲಾ ದಿನೇಶ್ ಅವರು ಬಿಜೆಪಿ-ಜೆಡಿಎಸ್ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಅವರನ್ನು ಹೊರತುಪಡಿಸಿ ಇನ್ನಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿದ್ದ ಉಪ ವಿಭಾಗಾಧಿಕಾರಿ ಬಿ.ಕೆ.ಸುದರ್ಶನ್ ಅವರು ಶಿಲಾ ದಿನೇಶ್ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ನೂತನ ಅಧ್ಯಕ್ಷರ ಆಯ್ಕೆ ನಂತರ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ಶೀಲಾ ದಿನೇಶ್ ಆಯ್ಕೆಗೆ ಸಂಪೂರ್ಣ ಸಹಕಾರ ನೀಡಿದ ಸಿ.ಟಿ.ರವಿ ಅವರಿಗೆ ವಿಶೇಷವಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ. ಅವರ ಬೆಂಬಲದಿಂದ ಮೈತ್ರಿ ಅಭ್ಯರ್ಥಿ ಆಯ್ಕೆಗೆ ಸಹಕಾರವಾಗಿದೆ. ಹಾಗೆಯೇ ಕಾಂಗ್ರೆಸ್ ಶಾಸಕ ಎಚ್.ಡಿ.ತಮ್ಮಯ್ಯ ಅವರು ಸಹ ತಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಹಾಕದೆ ಇದ್ದುದ್ದು ಅವಿರೋಧ ಆಯ್ಕೆಗೆ ಕಾರಣವಾಗಿದೆ. ಅವಿರೋಧ ಆಯ್ಕೆ ಎನ್ನುವುದು ಮುಳ್ಳಿನ ಹಾಸಿಗೆ ಇದ್ದಂತೆ ಎಲ್ಲರನ್ನೂ ಒಮ್ಮತದಲ್ಲಿ ಕೊಂಡೊಯ್ದು ನಗರದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಕಳೆದ ಹತ್ತು ತಿಂಗಳ ಹಿಂದೆ ಬೋಜೇಗೌಡ ಅವರ ಕೋರಿಕೆ ಮೇರೆಗೆ ಶೀಲಾ ದಿನೇಶ್ ಅವರಿಗೆ ೧೦ ತಿಂಗಳ ಅವಧಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದಾಗಿ ಮಾತು ಕೊಟ್ಟಿದ್ದೆವು. ಅದೇ ರೀತಿ ಎನ್‌ಡಿಎ ಅಭ್ಯರ್ಥಿಯಾಗಿ ಶೀಲಾ ದಿನೇಶ್ ಆಯ್ಕೆಯಾಗಿದ್ದಾರೆ. ಅದಕ್ಕೆ ಕಾಂಗ್ರೆಸ್ ಪಕ್ಷ ಸಹ ಅಭ್ಯರ್ಥಿಯನ್ನು ಹಾಕದೆ ಆಯ್ಕೆಗೆ ಸಹಕರಿಸಿದೆ. ಅದಕ್ಕಾಗಿ ಶಾಸಕ ಎಚ್.ಡಿ.ತಮ್ಮಯ್ಯ ಅವರಿಗೆ ಹಾಗೂ ಎಲ್ಲಾ ಪಕ್ಷದ ನಗರಸಭೆ ಸದಸ್ಯರಿಗೆ ಧನ್ಯವಾದ ತಿಳಿಸುತ್ತೇವೆ. ಶೀಲಾ ದಿನೇಶ್ ಅವರು ಒಳ್ಳೆಯ ಕೆಲಸ ಮಾಡಿ, ಜನಾನುರಾಗಿಯಾಗಿ ತಮ್ಮದೇ ಹೆಜ್ಜೆ ಗುರುತನ್ನು ಮೂಡಿಸಲಿ ಎಂದು ಹಾರೈಸಿದರು.

ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಯಾವುದೇ ಪಕ್ಷ ಎನ್ನುವುದಕ್ಕಿಂತ ನಗರದ ಅಭಿವೃದ್ಧಿ ಮುಖ್ಯ ಎನ್ನುವ ಉದ್ದೇಶದಿಂದ ಹಾಗೂ ಎನ್‌ಡಿಎ ಅಭ್ಯರ್ಥಿ ಶೀಲಾ ದಿನೇಶ್ ಅವರು ಪಕ್ಷೇತರ ಸದಸ್ಯರಾಗಿರುವುದರಿಂದ ಅವರ ಅವಿರೋಧ ಆಯ್ಕೆಗೆ ಸಹಕಾರ ಮಾಡಿದ್ದೇವೆ. ಶೀಲಾ ದಿನೇಶ್ ಮತ್ತು ಅವರ ಪತ್ನಿ ಹಾಗೂ ಸಹೋದರಿಸಹ ನಗರಸಭೆ ಸದಸ್ಯರಾಗಿ ಸುಮಾರು ೨೫ ವರ್ಷಗಳ ಅನುಭವ ಇರುವುದರಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಗರದ ಅಭಿವೃದ್ಧಿಗೆ ಒತ್ತುಕೊಟ್ಟು ಕೆಲಸ ಮಾಡಲಿ ಎಂದು ಹೇಳಿದರು.

ಚುನಾವಣೆ ನಂತರ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್‌ನ ಸದಸ್ಯರು ಸೇರಿದಂತೆ ಮುಖಂಡರುಗಳು, ಮಾಜಿ ಅಧ್ಯಕ್ಷರು ಇತರರು ಹಾಗೂ ನಗರಸಭೆ ಆಯುಕ್ತ ಬಿ.ಸಿ.ಬಸವರಾಜು ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

B. Sheela Dinesh was elected unopposed as the new president of the Municipal Council

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version