ಚಿಕ್ಕಮಗಳೂರು: ಜೆಡಿಎಸ್ ಪಕ್ಷವನ್ನು ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಮೂಲಕ ಮುಂಬರುವ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳನ್ನು ಸದಸ್ಯತ್ವ ಅಭಿಯಾನದ ಮೂಲಕ ಜೆಡಿಎಸ್ ಪಕ್ಷ ಸಂಘಟನೆಗೆ ಗುರಿ ಹೊಂದಲಾಗಿದೆ ಎಂದು ಪಕ್ಷದ ರಾಜ್ಯ ಮುಖಂಡ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದರು.
ಅವರು ಇಂದು ಜಿಲ್ಲೆಯ ಶೃಂಗೇರಿ ವಿಧಾನ ಸಭಾ ಕ್ಷೇತ್ರ ಕೊಪ್ಪದ ಒಕ್ಕಲಿಗರ ಸಂಘದ ಭವನದಲ್ಲಿ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಪಕ್ಷದ ಮೇಲೆ ಅಭಿಮಾನವಿಟ್ಟು ಆಗಮಿಸಿರುವ ಕಾರ್ಯಕರ್ತರು, ಹಿತೈಷಿಗಳ ನಿರೀಕ್ಷೆಗೆ ಚ್ಯುತಿ ಬಾರದಂತೆ ನೆಡೆಯುತ್ತೇವೆ, ಪಕ್ಷ ಸಂಘಟನೆ ಬಲವಾದಷ್ಟು ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರವರಿಗೆ ಧ್ವನಿಯಾಗಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.
ರಾಜ್ಯ ಜೆಡಿಎಸ್ ಮುಖಂಡ ಸುಧಾಕರ ಶೆಟ್ಟಿ ರವರು ಪಕ್ಷ ಸಂಘಟನೆಗೆ ಗಟ್ಟಿಯಾಗಿ ಶ್ರಮವಹಿಸುತ್ತಿರುವುದು ಶ್ಲಾಘನೀಯ ಎಂದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದ ತಮಗೆ ಮತ ನೀಡಿದವರನ್ನು ಮರೆಯಬಾರದೆಂದು, ಈ ದೃಢ ನಿರ್ಧಾರ ಕೈಗೊಂಡಿದ್ದೀರಿ ಎಂದರು.
ಪಕ್ಷದ ಕಾರ್ಯಕರ್ತರು ಶೃಂಗೇರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲವಾಗಿ ಕಟ್ಟುವ ಸಂಕಲ್ಪ ಮಾಡಬೇಕಾಗಿದೆ, ಸುಧಾಕರ ಶೆಟ್ಟರವರು ಯಾವುದೇ ಅಪೇಕ್ಷೆ ಇಟ್ಟುಕೊಳ್ಳದೆ ಅಮ್ಮ ಫೌಂಡೇಷನ್ ಮೂಲಕ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ, ಮಾಜಿ ಶಿಕ್ಷಣ ಸಚಿವ ಗಾಂಧಿವಾದಿ ಹೆಚ್.ಜಿ ಗೋವಿಂದೇ ಗೌಡರ ಕರ್ತವ್ಯ ನಿಷ್ಠೆಯ ಬಗ್ಗೆ ಸ್ಮರಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮಾರ್ಗದರ್ಶನ, ನಾಯಕರಾದ ಹೆಚ್.ಡಿ ಕುಮಾರಸ್ವಾಮಿ ರವರ ಆದೇಶದ ಮೇರೆಗೆ ಈ ಸದಸ್ಯತ್ವ ಅಭಿಯಾನವನ್ನು ನಡೆಸುತ್ತಿದ್ದು, ಆ. ೨೦ ರೋಳಗೆ ಇದನ್ನು ಮುಕ್ತಾಯಗೊಳಿಸಬೇಕೆಂಬ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕ್ಯಗೊಳ್ಳುವುದಾಗಿ ತಿಳಿಸಿದರು.
ಜೆಡಿಎಸ್ ಪಕ್ಷದ ಮೇಲೆ ಇಟ್ಟಿರುವ ಅಭಿಮಾನಕ್ಕೆ ಬೆಲೆ ಕಟ್ಟಲಾಗದು, ಪಕ್ಷದ ಕಾರ್ಯಕರ್ತರು ಮಳೆ, ಗಾಳಿ, ಚಳಿ, ಬಿಸಿಲಿಗೆ ಜಗ್ಗುವುದಿಲ್ಲ ಎಂಬುವುದಕ್ಕೆ ಇಲ್ಲಿ ಸೇರಿರುವ ಕಾರ್ಯಕರ್ತರ ಪಡೆ ನಿದರ್ಶನ ಎಂದ ಅವರು ಮೂರು ಬಾರಿ ಚುನಾವಣೆಯಲ್ಲಿ ಪರಾಭವಗೊಂಡಿದ್ದರು ನಗು ಮುಖವನ್ನು ಯಾರು ಕಿತ್ತುಕೊಳ್ಳಲು ಸಾದ್ಯವಿಲ್ಲ, ಪ್ರತಿ ಹಂತದಲ್ಲೂ ಪಕ್ಷ ಸಂಘಟನೆ ಮಾಡಿ ಬೆಂಬಲಿಸುತ್ತಿದ್ದೀರಿ ಎಂದರು.
ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಮಾತನಾಡಿ ಜೆಡಿಎಸ್ ಪಕ್ಷ ಸಂಘಟನೆಗೆ ಯುವ ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಬದಲಾವಣೆಯ ದಿಗ್ಸೂಚಿ ಎಂದು ಹೇಳಿದರು. ಸಕಲೇಶಪುರ ಮಾಜಿ ಶಾಸಕ ಹೆಚ್.ಕೆ ಕುಮಾರಸ್ವಾಮಿ ಮಾತನಾಡಿ ಒಂದು ಪಕ್ಷ ರಾಜಕೀಯವಾಗಿ ಸದೃಢವಾಗಬೇಕಾದರೆ ಪ್ರಾಥಮಿಕ ಸದಸ್ಯತ್ವ ನೋಂದಣಿ ಅಗತ್ಯವಾಗಿದ್ದು, ಈ ಮೂಲಕ ಪಕ್ಷ ಸಂಘಟನೆ ಮಾಡಬೇಕು ಎಂದು ಅಭಿಪ್ರಾಯಿಸಿದರು.
ಯಾವುದೇ ಅಭಿವೃದ್ಧಿ ಕೈಗೊಳ್ಳದ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಕಾರ್ಯಕರ್ತರು ಮನಸ್ಸು ಮಾಡಿ ಪಕ್ಷಕ್ಕೆ ಶಕ್ತಿ ತುಂಬಬೇಕೆಂದು ಹೇಳಿದ ಅವರು ನೂತನ ಸದಸ್ಯತ್ವ ಪಡೆಯುವಾಗ ಎಲ್ಲಾ ವರ್ಗದ ಜನರಿಗೆ ಅವಕಾಶ ನೀಡಬೇಕು, ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸಮಿತಿ ರಚಿಸುವ ಅಗತ್ಯ ಇದೆ ಎಂದು ಸಲಹೆ ನೀಡಿದರು,
ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಕೋರ್ ಕಮಿಟಿ ಸದಸ್ಯ ಹೆಚ್.ಜಿ ವೆಂಕಟೇಶ್, ಕ್ಷೇತ್ರ ಸಮಿತಿ ಅಧ್ಯಕ್ಷ ದಿವಾಕರ ಭಟ್, ರಾಜ್ಯ ಮಹಿಳಾ ಘಟಕದ ರಶ್ಮೀ ರಾಮೇಗೌಡ, ಕುಸುಮ ವಾಸಪ್ಪ, ರಾಮಸ್ವಾಮಿ, ಗೋವಿಂದೇಗೌಡ, ಮಂಜುನಾಥ್, ಚಂದ್ರಶೇಖರ್, ಉದಯ ಸುವರ್ಣ, ಅನಿಲ್ ನಾರ್ವೇ, ಬದ್ರಿಯಾ ಮಹ್ಮದ್, ಸುರೇಶ್, ದೇವೇಂದ್ರ, ಶುಭಾಅರುಣ್, ಪುಷ್ವಲತ, ಶಿವದಾಸ್, ಕಳಸಪ್ಪ, ಸಂಜಯ್ ಮತ್ತಿತರರು ಉಪಸ್ಥಿತರಿದ್ದರು, ಮೊದಲಿಗೆ ಪಕ್ಷದ ಮುಖಂಡ ವಿನಯ್ ಕಣಿವೆ ಸ್ವಾಗತಿಸಿದರು.
Membership campaign to face the upcoming TPA-ZIP elections