ALSO FEATURED IN

ನಿಗದಿತ ಸ್ಥಳದಲ್ಲಿಯೇ ಗಣಪತಿ ಮೂರ್ತಿ ವಿಸರ್ಜಿಸಬೇಕು

Spread the love

ಚಿಕ್ಕಮಗಳೂರು: ಜಿಲ್ಲಾಡಳಿತದ ಆದೇಶದಂತೆ ಪರಿಸರಕ್ಕೆ ಪೂರಕವಾಗಿ ತಯಾರಾಗಿರುವ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ವಿಸರ್ಜಿಸಬೇಕೆಂದು ಸಾರ್ವಜನಿಕರಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಮನವಿ ಮಾಡಿದರು.

ಅವರು ನಗರಸಭೆ ವತಿಯಿಂದ ಕೋಟೆಕೆರೆ ಸೇರಿದಂತೆ ನಗರದ ಮತ್ತಿತರೆಡೆ ಗಣಪತಿ ವಿಸರ್ಜಿಸಲು ಸಿದ್ಧತೆ ನಡೆಸಿರುವ ಬಗ್ಗೆ ಪರಿಶೀಲಿಸಿ ಮಾತನಾಡಿ
ನಗರದ ಜನತೆ ಗೌರಿ ಗಣೇಶ ಹಬ್ಬಗಳ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಜೊತೆಗೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮೆರವಣಿಗೆ ನಡೆಸಬೇಕೆಂದು ವಿನಂತಿಸಿದರು.

ಇದೊಂದು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸರ್ವರಲ್ಲಿ ಭಕ್ತಿಭಾವ ತುಂಬಿ ಬರಲಿ, ಇದಕ್ಕೆ ಜಿಲ್ಲಾಡಳಿತ ಮತ್ತು ತಾವು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕೆರೆಗಳು ದೂರ ಇರುವುದರಿಂದ ನಗರಸಭೆಯಿಂದ ಆಜಾದ್ ವೃತ್ತ, ಹನುಮಂತಪ್ಪ ವೃತ್ತ, ದಂಟರಮಕ್ಕಿ ಕೆರೆ ಬದಿ, ಟೌನ್ ಕ್ಯಾಂಟಿನ್ ವೃತ್ತ, ಎಐಟಿ ವೃತ್ತ ಸೇರಿದಂತೆ ೫ ಭಾಗಗಳಲ್ಲಿ ಟ್ರಾಕ್ಟರ್‌ನಲ್ಲಿಯೆ ಗಣಪತಿಯನ್ನು ವಿಸರ್ಜಿಸಲು ಅನುಕೂಲ ಕಲ್ಪಿಸಲಾಗಿದೆ ಎಂದರು.

ಸ್ವತಂತ್ರ ಪೂರ್ವದಲ್ಲಿ ಬಾಲಗಂಗಾಧರ ತಿಲಕರು ಗಣಪತಿ ಪ್ರತಿಷ್ಠಾಪಿಸಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋರಾಟ ನಡೆಸಿದ ಪರಿಣಾಮ ಸ್ವತಂತ್ರ ಸಂಗ್ರಾಮದಲ್ಲಿ ಯಶಸ್ವಿಯಾಗಿದ್ದರು ಎಂದ ಅವರು, ಹಬ್ಬದ ಅಂಗವಾಗಿ ಬೀದಿಬದಿ ಲೈಟ್ ಅಳವಡಿಸಿ ಕಲ್ಯಾಣಿ ಸುತ್ತ ಮುಂಜಾಗ್ರತಾ ಕ್ರಮವಾಗಿ ಭದ್ರತೆಯನ್ನು ಏರ್ಪಡಿಸುವಂತೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್‌ಗಳನ್ನು ಆಹ್ವಾನಿಸಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕೋಟೆಕೆರೆ ವೀಕ್ಷಣೆ ಮಾಡಿ ಗೌರಿ ಗಣೇಶ ಹಬ್ಬದ ಅಂಗವಾಗಿ ಗಣೇಶ ಮೂರ್ತಿಗಳನ್ನು ಪೂಜಿಸಿ ೧-೫ ದಿನಗಳವರೆಗೆ ಸಾರ್ವಜನಿಕರು, ಭಕ್ತಾಧಿಗಳು ವಿಸರ್ಜಿಸುವ ಸಂಪ್ರದಾಯ ಇದ್ದು, ಈ ಹಿಂದೆ ಬಸವನಹಳ್ಳಿ ಕೆರೆಯಲ್ಲಿ ವಿಸರ್ಜಿಸಲಾಗುತ್ತಿತ್ತು ಎಂದರು. ಈ ಕೆರೆ ಅಭಿವೃದ್ಧಿಪಡಿಸಲು ೨೦೨೨ ರ ನಂತರ ನಗರಸಭೆ ವತಿಯಿಂದ ಕೋಟೆಕೆರೆಯಲ್ಲಿ ಕಲ್ಯಾಣಿ ನಿರ್ಮಿಸಿ, ನಗರ ಸೇರಿದಂತೆ ಸುತ್ತಮುತ್ತಲ ನಾಗರಿಕರು ಗಣಪತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ವಿಸರ್ಜಿಸಲು ಅನುಕೂಲವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ಕೋಟೆಕೆರೆಯನ್ನು ಡಿಪಿಆರ್ ಮುಗಿಸಿ ಬೇಸಿಗೆಯಲ್ಲಿ ಸಂಪೂರ್ಣ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ ಅವರು, ಬಸವನಹಳ್ಳಿ ಕೆರೆ ಅಭಿವೃದ್ಧಿಗೆ ಕೆಲವು ತಾಂತ್ರಿಕ ತೊಂದರೆಗಳಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಅಭಿವೃದ್ಧಿಪಡಿಸಲು ಗುರಿ ಹೊಂದಲಾಗಿದೆ ಎಂದರು. ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ಗಣೇಶ ವಿಸರ್ಜನೆ ಸಂಬಂಧ ಕೋಟೆಕೆರೆಯನ್ನು ಕಳೆದ ಒಂದು ವಾರದಿಂದ ನಗರಸಭೆ ಸಿಬ್ಬಂದಿ ಸ್ವಚ್ಚತೆ ಕಾರ್ಯ ನಡೆಸಿ ಕ್ರಮ ವಹಿಸುತ್ತಿದ್ದಾರೆಂದು ಹೇಳಿದರು.

ಗಣಪತಿ ವಿಸರ್ಜಿಸಲು ನಗರದ ನಾಗರಿಕರಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ನಗರದ ವಿವಿಧೆಡೆ ಆರು ಸ್ಥಳಗಳಲ್ಲಿ ಗಣಪತಿ ವಿಸರ್ಜಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ ಅವರು, ಇದರ ಸದುಪಯೋಗವನ್ನು ನಾಗರಿಕರು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷೆ ಶೀಲಾದಿನೇಶ್, ಇಂಜಿನಿಯರ್ ಲೋಕೇಶ್, ಆರೋಗ್ಯ ನಿರೀಕ್ಷಕರಾದ ಈಶ್ವರ, ರಂಗಪ್ಪ, ವಿವೇಕ್, ಶ್ರೀನಿವಾಸ್, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ವಿಕಾಸ್ ಹಾಗೂ ನಗರಸಭೆ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

The Ganpati idol should be immersed at the designated place.

 

Facebook
X
WhatsApp
Telegram
Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

[t4b-ticker]
Exit mobile version