ALSO FEATURED IN

ಅಣುವ್ರತ ಕ್ರಿಯೆಟಿವ್ ಕಾಂಟೆಸ್ಟ್‌ನಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Spread the love

ಚಿಕ್ಕಮಗಳೂರು: ಜೈನ್ ಸಮುದಾಯದ ಗುರುಗಳ ಕೃಪಾಶೀರ್ವಾದದಿಂದ ಸುಖ, ಶಾಂತಿ, ನೆಮ್ಮದಿ ಕಾಣುತ್ತಿದ್ದೇವೆ ಎಂದು ಅಣುವ್ರತ ಸಂಘದ ಅಧ್ಯಕ್ಷೆ ಮಂಜುಳಾ ಬನ್ಸಾಲಿ ಹೇಳಿದರು.

ಅವರು ತೇರಾಪಂಥ್ ಭವನದಲ್ಲಿ ಏರ್ಪಡಿಸಲಾಗಿದ್ದ ಅಣುವ್ರತ ಕ್ರಿಯೆಟಿವ್ ಕಾಂಟೆಸ್ಟ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯದಿಂದ ಐವರು ವಿದ್ಯಾರ್ಥಿಗಳನ್ನು ಈ ಸ್ಪರ್ಧೆಗೆ ಆಯ್ಕೆಮಾಡಿ ಕಳುಹಿಸಲಾಗಿದ್ದು ಇದರಲ್ಲಿ ಮೂವರು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ. ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹೊರತರಲು ಸ್ಪರ್ಧೆಗಳು ಸಹಕಾರಿ ಎಂದರು.

ವಿದ್ಯಾರ್ಥಿಗಳ ಪರಿಶ್ರಮದಿಂದ ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ಬಹುಮಾನ ತಂದಿರುವುದು ಅಣುವ್ರತ ಸಮಿತಿಗೆ ಸಫಲತೆ ತರುವುದರ ಜೊತೆಗೆ ಸಮಾಜಕ್ಕೆ ಒಳ್ಳೆಯ ಹೆಸರು ತಂದಿದ್ದಾರೆಂದು ಶ್ಲಾಘಿಸಿದರು.

ಅಣುವ್ರತ ಸಂಘದಿಂದ ಕಳೆದ ಮೂರು ವರ್ಷಗಳಿಂದ ಈ ಸ್ಪರ್ಧೆಗಳನ್ನು ನಡೆಸುತ್ತ ಬರುತ್ತಿದ್ದು, ಇದಕ್ಕಾಗಿ ನಗರದ ೨೫ ಶಾಲೆಗಳಲ್ಲಿ ಮನವರಿಕೆ ಮಾಡಲಾಗಿದ್ದು, ೨ ಸಾವಿರ ಮಕ್ಕಳು ಭಾಗವಹಿಸಿದ್ದರು. ಶಾಲೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ತೇರಾಪಂಥ್ ಭವನದಲ್ಲಿ ಜಿಲ್ಲಾಮಟ್ಟದ ಸ್ಪರ್ಧೆ ನಡೆಸಿ ರಾಜ್ಯಮಟ್ಟಕ್ಕೆ ಅಯ್ಕೆಮಾಡಿ ಕಳಿಸುತ್ತೇವೆ ಎಂದು ಹೇಳಿದರು.

ರಾಜ್ಯಮಟ್ಟದ ಸ್ಪರ್ಧೆ ಈ ವರ್ಷ ಬೆಂಗಳೂರಿನಲ್ಲಿ ನಡೆದಿದ್ದು, ಜಿಲ್ಲೆಯ ಐವರು ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ. ಅವರನ್ನು ಅಹಮದಾಬಾದ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

ಕೋ-ಆರ್ಡಿನೇಟರ್ ಗೌತಮ್ ಅಚ್ಚ ಮಾತನಾಡಿ, ಪ್ರಬಂಧ ಸ್ಪರ್ಧೆಯಲ್ಲಿ ಸೆಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿನಿ ಮಾನ್ವಿತ್, ಸಾಯಿ ಏಂಜಲ್ಸ್ ಶಾಲೆಯ ಧವನ್ ಇವರುಗಳು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದರು.

ಚಿತ್ರಕಲೆ ಸ್ಪರ್ಧೆಯಲ್ಲಿ ಸಾಯಿ ಏಂಜಲ್ಸ್ ಶಾಲೆಯ ಇಂಚನಗೌಡ ಮೂರನೇ ಸ್ಥಾನ, ಸಮಂತ್, ಚಿರಂತ್ ಇವರುಗಳು ಸೋಲೋ ಗಾಯನ ಸ್ಪರ್ಧೆಯಲ್ಲಿ ವಿಜೇತರಾಗಿದ್ದು, ಒಟ್ಟು ೬೦೦ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ವಿವರಿಸಿದರು.

ತೇರಾಪಂಥ್ ಮಹಾ ಸಭಾದ ಅಧ್ಯಕ್ಷ ಮಹೇಂದ್ರ ಡೋಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಆಚಾರ್ಯ ಮಹಾ ಸಮಾನ್ ಜೀ ವಹಿಸಿದ್ದರು. ಕೇಂದ್ರ ಸಚಿವ ಅರ್ಜುನ್ ಮೇಘವಾಲ್ ಪುರಸ್ಕಾರ ನೀಡಿದರು.

ಕಾರ್ಯಕ್ರಮದಲ್ಲಿ ಸಂತೋಷ್ ಗಾಧಿಯಾ, ಲಾಲ್‌ಚಂದ್ ಬನ್ಸಾಲಿ, ನರಿತಾ ಗಾಡಿಯಾ, ಪುಷ್ಪರಾಜ್ ಗಾಡಿಯಾ, ಚಂದ್ರ ಗಾಡಿಯಾ, ಸುರೇಂದ್ರ ಗೋಖ್ರು, ಮದನ್‌ಚಂದ್ ಗಾಡಿಯಾ, ಜಯಂತಿ ಲಾಲ್, ನಿಖಿಲ್ ಗಾಡಿಯಾ, ಅಭಿಷೇಕ್ ಅಚ್ಚ ಉಪಸ್ಥಿತರಿದ್ದರು

Congratulations to the students who won the Aṇuvrata Vrat Creative Contest

Facebook
X
WhatsApp
Telegram
Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

Spread the love

ಚಿಕ್ಕಮಗಳೂರು: ಭಕ್ತಿ, ಧಾರ್ಮಿಕತೆ, ವೈಚಾರಿಕತೆಯ ಮೌಲ್ಯಗಳನ್ನು ಜನರ ಮನಸ್ಸಿನಲ್ಲಿ ಬಿತ್ತುವ ಸಲುವಾಗಿ ಸೆ.೧ ರಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ…

Spread the love

ಚಿಕ್ಕಮಗಳೂರು: ಹಿಂದುತ್ವವನ್ನು ಗಟ್ಟಿಗೊಳಿಸಲು ಧಾರ್ಮಿಕವಾಗಿ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಿ ಆಚರಿಸುವುದೇ ಸಾರ್ವಜನಿಕ ಗಣೇಶೋತ್ಸವದ ಪ್ರಮುಖ ಉದ್ದೇಶ ಎಂದು ಶಾಸಕ ಹೆಚ್.ಡಿ.…

[t4b-ticker]
Exit mobile version