ALSO FEATURED IN

ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ ಸ್ಥಾನ

Spread the love

ತರೀಕೆರೆ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ವಿವಿಧ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ 14 ಹಾಗೂ 17 ವರ್ಷ ವಯೋಮಿತಿಯೊಳಗಿನ ಬಾಲಕರ ಮತ್ತು ಬಾಲಕಿಯರ ಹೊನಲು ಬೆಳಕಿನ ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಿಯ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ ಸ್ಥಾನ ಗೆದ್ದುಕೊಂಡಿದೆ.

ಬೆಳಗಾವಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ, ಬೆಂಗಳೂರು ತಂಡ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವು.

14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ, ಕಲಬುರಗಿ ತಂಡ ದ್ವಿತೀಯ, 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಬೆಂಗಳೂರು ಪ್ರಥಮ, ಮೈಸೂರು ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದವು.

ಶಾಸಕ ಜಿ.ಎಚ್.ಶ್ರೀನಿವಾಸ್ ಬಹುಮಾನ ವಿತರಿಸಿದರು. ಡಿಡಿಪಿಐ ತಿಮ್ಮರಾಜು, ಎ ಸಿ ಎನ್.ವಿ.ನಟೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಫಾಲಾಕ್ಷಮೂರ್ತಿ, ಬಿಇಒ ಪರಶುರಾಮಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಅನಂತಪ್ಪ, ಪ್ರಧಾನ ಕಾರ್ಯದರ್ಶಿ ದೇವರಾಜ್, ಅಜ್ಜಂಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವೇದಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಭಾಗವಹಿಸಿದ್ದರು.

Mysore team wins first place in girls’ category at state-level volleyball tournament

Facebook
X
WhatsApp
Telegram
Spread the love

ತರೀಕೆರೆ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ವಿವಿಧ…

Spread the love

ಚಿಕ್ಕಮಗಳೂರು: ಮಲ್ಲೇನಹಳ್ಳಿ ಬಿಂಡಿಗ ದೇವೀರಮ್ಮನ ದರ್ಶನ ಪಡೆಯಲು ಭಕ್ತರು ಬರಿಗಾಲಿನಲ್ಲೇ ದಣಿವರಿಯದೆ ಬೆಟ್ಟ ಹತ್ತಿದರು. ಮಳೆ, ಕಾಡುಮೇಡು, ತಗ್ಗುದಿಣ್ಣೆ, ಮೊನಚು, ಬೆಣಚು…

Spread the love

ಚಿಕ್ಕಮಗಳೂರು:  ಅಪರಾಧವನ್ನು ದ್ವೇಷಿಸಬೇಕು ಹೊರತು, ಅಪರಾಧಿಯನ್ನಲ್ಲ. ಆಕಸ್ಮಿಕವಾಗಿ ಪೆಟ್ಟು ತಿಂದು ಶಿಕ್ಷೆಗೆ ಗುರಿಯಾಗುವ ವ್ಯಕ್ತಿಗಳು, ಬಿಡುಗಡೆ ಬಳಿಕ ಸಾತ್ವಿಕ ಜೀವನದಡಿ…

Spread the love

ತರೀಕೆರೆ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ವಿವಿಧ…

Spread the love

ಚಿಕ್ಕಮಗಳೂರು: ಮಲ್ಲೇನಹಳ್ಳಿ ಬಿಂಡಿಗ ದೇವೀರಮ್ಮನ ದರ್ಶನ ಪಡೆಯಲು ಭಕ್ತರು ಬರಿಗಾಲಿನಲ್ಲೇ ದಣಿವರಿಯದೆ ಬೆಟ್ಟ ಹತ್ತಿದರು. ಮಳೆ, ಕಾಡುಮೇಡು, ತಗ್ಗುದಿಣ್ಣೆ, ಮೊನಚು, ಬೆಣಚು…

Spread the love

ಚಿಕ್ಕಮಗಳೂರು:  ಅಪರಾಧವನ್ನು ದ್ವೇಷಿಸಬೇಕು ಹೊರತು, ಅಪರಾಧಿಯನ್ನಲ್ಲ. ಆಕಸ್ಮಿಕವಾಗಿ ಪೆಟ್ಟು ತಿಂದು ಶಿಕ್ಷೆಗೆ ಗುರಿಯಾಗುವ ವ್ಯಕ್ತಿಗಳು, ಬಿಡುಗಡೆ ಬಳಿಕ ಸಾತ್ವಿಕ ಜೀವನದಡಿ…

[t4b-ticker]
Exit mobile version