Author: chikkamagalur express

ಚಿಕ್ಕಮಗಳೂರು: : ಹಿಂದುಳಿದ ವರ್ಗಗಳ ಆಯೋಗದಿಂದ ಸೆ.೨೨ ರಿಂದ ಅ.೭ ರವರೆಗೆ ನಡೆಸಲಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಮನೆಗೆ ಭೇಟಿನೀಡಿದ ಗಣತಿದಾರರಿಗೆ ಕಾಲಂ ನಂಬರ್ ೯ ರಲ್ಲಿ ಒಕ್ಕಲಿಗ ಎಂದು ನಮೂದಿಸುವಂತೆ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಸಮಾಜ ಬಾಂಧವರಲ್ಲಿ ಮನವಿ ಮಾಡಿದರು. ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು, ಸರ್ಕಾರ ನಿಗದಿಪಡಿಸಿರುವ ಆಯೋಗದ ಸದಸ್ಯರು ಸುಮಾರು ೬೦ ಕಾಲಂ ಉಳ್ಳ ಕುಟುಂಬದ ವಿವರನ್ನು ಪಡೆಯಲಿದ್ದು, ಒಕ್ಕಲಿಗ ಸಮುದಾಯ ಹಿಂದುಳಿದ ವರ್ಗಗಳ ಪ್ರವರ್ಗ-೩(ಎ) ವರ್ಗಕ್ಕೆ ಸೇರಿಸಿದ್ದು, ಕಾಲಂ ೯ ರಲ್ಲಿ ಜಾತಿ, ಕಾಲಂ ೧೦ ರಲ್ಲಿ ಉಪಜಾತಿಯನ್ನು ನಮೂದಿಸಬೇಕಾಗಿರುತ್ತದೆ ಎಂದಿದ್ದಾರೆ. ಉಪಜಾತಿ ಕಾಲಂನಲ್ಲಿ ಸಮುದಾಯದ ಉಪ ಪಂಗಡಗಳಾದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್ಕರ್ ಒಕ್ಕಲಿಗ, ದಾಸ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಕುಂಚಿಟಿಗ, ಹೆಗ್ಗಡೆ, ರೆಡ್ಡಿ ಇತ್ಯಾದಿ ಉಪಜಾತಿಗಳನ್ನು ನಮೂದಿಸಬೇಕು ಎಂದು ಹೇಳಿದ್ದಾರೆ. ಕುಟುಂಬಕ್ಕೆ ಸಂಬಂಧಿಸಿದ…

Read More

ಚಿಕ್ಕಮಗಳೂರು: ದೈಹಿಕ ಕಾಯಿಲೆಗಳಿಗಿಂತ ಹೆಚ್ಚಾಗಿ ಇಂದು ಮನಸ್ಸು ಮತ್ತು ಸಮಾಜದ ಮೇಲೆ ಮಾನಸಿಕ ಕಾಯಿಲೆ ಪ್ರಭಾವ ಬೀರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು. ಅವರು ಇಂದು ನಗರದ ಹನುಮಂತಪ್ಪ ವೃತ್ತದಲ್ಲಿ ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆ, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಾನಸಿಕ ಆರೋಗ್ಯ ಅರಿವು ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಒತ್ತಡದ ಜೀವನ, ಅತಿಯಾದ ನಿರೀಕ್ಷೆ, ಹಂಚಿಕೊಳ್ಳುವಂತಹ ಸ್ನೇಹ ಸಂಬಂಧವನ್ನು ಕಡಿಮೆ ಮಾಡಿಕೊಂಡಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಸಮಾಜದೊಂದಿಗೆ ಸಂಪರ್ಕ ಅಗದಿದ್ದರೆ ವ್ಯಕ್ತಿಗತವಾಗಿ ಮಾನಸಿಕ ಒತ್ತಡ ರೂಪುಗೊಳ್ಳುತ್ತದೆ ಎಂದು ಹೇಳಿದರು. ಈಗಿನ ಜೀವನ ಶೈಲಿ ಮಾನಸಿಕ ಒತ್ತಡಕ್ಕೆ ಕಾರಣವಾಗಿದ್ದು, ಇದೊಂದು ದೊಡ್ಡ ಪಿಡುಗಾಗಿ ಪರಿವರ್ತನೆಯಾಗಿದೆ. ಮಾದಕ ದ್ರವ್ಯಗಳು ಇದಕ್ಕೆ ಬೆಂಬಲವಾಗಿ ನಿಂತಿದೆ. ಇದರಿಂದ ಹೊರಬರಲು ಏನು ಮಾಡಬೇಕೆಂಬ ಬಗ್ಗೆ ಅರಿವು ಮೂಡಿಸುವುದೇ ಈ ಜಾಥಾದ ಪ್ರಮುಖ ಉದ್ದೇಶ ಎಂದರು. ಒತ್ತಡದಿಂದ ಮುಕ್ತವಾಗಲು ಪೂರ್ವಿಕರ ಜ್ಞಾನ ಬಳಸಿಕೊಂಡು ಮಾನಸಿಕತೆಯಿಂದ ಹೊರಬರಬೇಕು. ಇದಕ್ಕಾಗಿ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿ ಜನರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕೂಡಲೇ ಕ್ರಮ ಕೈಗೊಳ್ಳುವಂತೆೆಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, “ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಜನ ಜೀವ ಭಯದಲ್ಲಿಯೇ ಓಡಾಡುವಂತಾಗಿದೆ. ಸಣ್ಣ ಬೆಳೆಗಾರರು ಬೆಳೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಕಾಡಾನೆಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು,” ಎಂದು ಸಭೆಯಲ್ಲಿ ಹಾಜರಿದ್ದ ಕೊಪ್ಪ ಡಿಎಫ್ ಓ ಶಿವಶಂಕರ್ ಅವರಿಗೆ ಸೂಚನೆ ನೀಡಿದರು. ಇದಕ್ಕೂ ಮುನ್ನ ಆನೆಗಳ ಹಾವಳಿ ಬಗ್ಗೆ ಪ್ರಸ್ತಾಪಿಸಿದ ಕ್ರೆಡಲ್ ಅಧ್ಯಕ್ಷೂ ಆಗಿರುವ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಶೃಂಗೇರಿ, ಬಾಳೆಹೊನ್ನೂರು ಭಾಗದಲ್ಲಿ ಐದು ಆನೆಗಳು ನಿರಂತರವಾಗಿ ಬೆಳೆ ನಾಶ ಮಾಡುತ್ತಿದ್ದವು. ಜತೆಗೆ ಈಗಾಗಲೇ ಕಾಡಾನೆ ದಾಳಿಗೆ…

Read More

ಚಿಕ್ಕಮಗಳೂರು: ಜಿಲ್ಲಾ ಬಿಜೆಪಿಯ ಸೇವಾ ಪ್ರಾಕ್ಷಿಕ ಅಭಿಯಾನ ಮತ್ತು ಕಾರ್ಯಾಗಾರ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯ ಕಚೇರಿಯಲ್ಲಿ ಇಂದು ನಡೆಯಿತು. ಭಾರತ ಮಾತೆ ಫೋಟೋಗೆ ಪು?ರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಸಿ.ಟಿ.ರವಿ ಮಾತನಾಡಿ, ಸೇವೆ ಮಾಡುವ ಉದ್ದೇಶವೇ ಸೇವಾ ಪ್ರಾಕ್ಷಿಕ ಅಭಿಯಾನ. ವಿಶ್ವದ ನಾಲ್ಕನೇ ಶಕ್ತಿಯಾಗಿದ್ದೇವೆ. ಪರಾವಲಂಬಿಯಾಗಿಸುವ ಮೂಲಕ ದೇಶಕ್ಕೆ ಪೆಟ್ಟು ಕೊಡುವ ಯತ್ನ ನಡೆಯುತ್ತಿದೆ. ಅದನ್ನು ಜಾಗೃತಿಯಿಂದ ಎದುರಿಸಬೇಕು ಎಂದರು. ಸ್ವದೇಶಿ ವಸ್ತುಗಳಿಗೆ ಒತ್ತು, ಸ್ವಚ್ಛತಾ ಆಂದೋಲನದಲ್ಲಿ ಸಮಾಜವನ್ನು ತೊಡಗಿಸಬೇಕು. ನರೇಂದ್ರ ಮೋದಿಯವರ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದು ತಿಳಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬ್ರಹ್ಮಾಂಡ ಸಾಲವನ್ನು ರಾಜ್ಯ ಸರ್ಕಾರ ಮಾಡಿರುವುದನ್ನು ಜನರಿಗೆ ತಿಳಿಸಬೇಕು. ಕೇಂದ್ರ ಸರ್ಕಾರದ ತೆರಿಗೆ ಕಡಿತದಿಂದಾಗಿರುವ ಲಾಭಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ದೇವರಾಜಶೆಟ್ಟಿ ಮಾತನಾಡಿ, ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳು ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ಕಾರ್ಯಕ್ರಮಗಳು, ನೀತಿಗಳನ್ನು ಪ್ರತಿ ಮನೆಗೆ ಮುಟ್ಟಿಸುವ…

Read More

ಚಿಕ್ಕಮಗಳೂರು: ವನ ಸಂಪತ್ತು ಇದ್ದರೆ ಮಾತ್ರ ಮನುಷ್ಯರು ಹಾಗೂ ಇತರೆ ಜೀವ ಸಂಕುಲಗಳು ಉಳಿಯಲು ಸಾಧ್ಯ ಅರಣ್ಯ ರಕ್ಷಣೆ ಮಾಡಬೇಕಾದುದು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಎಲ್ಲರೂ ಕಾನೂನು ಪಾಲಕರಾದರೆ ಯಾವುದೆ ಸಮಸ್ಯೆ ಎದುರಾಗುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ವಿ.ಹನುಮಂತಪ್ಪ ಹೇಳಿದರು. ಅವರು ಶ್ರೀನಿವಾಸ ನಗರದಲ್ಲಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಅರಣ್ಯ ಹುತಾತ್ಮ ದಿನಾಚರಣೆಯಲ್ಲಿ ದಿ.ಪಿ.ಶ್ರೀನಿವಾಸ್ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿ ಮಾತನಾಡಿ ಮಾನವನ ದುರಾಸೆಯಿಂದ ವನ ಮತ್ತು ವನ್ಯಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವ ಸಂಬಂದ ಅರಣ್ಯ ಸಂಪತ್ತನ್ನು ನಾಶ ಮಾಡುತ್ತಿರುವುದರಿಂದ ಕಾಡಿನಲ್ಲಿರಬೇಕಾದ ಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕುತ್ತಿವೆ. ಅವುಗಳ ಆವಾಸ ಸ್ಥಾನವನ್ನು ಮನುಷ್ಯರು ಆಕ್ರಮಿಸುತ್ತಿರುವ ಸಲುವಾಗಿ ದಿಕ್ಕುತೋಚನೆ ನಗರಪ್ರದೇಶದತ್ತ ದಾವಿಸುತ್ತಿದೆ. . ಪ್ರಾಣಿ, ಪಕ್ಷಿಗಳು ಸೇರಿದಂತೆ ಇರುವೆಯಿಂದ ಆನೆಯವರೆಗೂ ಎಲ್ಲವೂ ವಾಸಿಸುವ ಸ್ಥಳ ಅರಣ್ಯ ಪ್ರದೇಶಗಳು, ಅವುಗಳು ಉಳಿದರೆ ಮಾತ್ರವೇ ನಾವುಗಳು ಉಳಿಯಲು ಸಾಧ್ಯ. ನಮ್ಮ ರಾಜ್ಯದ ಓರ್ವ ದಕ್ಷ, ನಿಷ್ಠಾವಂತ ಪ್ರಾಮಾಣಿಕ ಅರಣ್ಯಾಧಿಕಾರಿ ಪಿ.ಶ್ರೀನಿವಾಸ್…

Read More

ಚಿಕ್ಕಮಗಳೂರು:  ಮಾನಸಿಕ ಮತ್ತು ಮಾದಕ ವ್ಯಸನಿಗಳು ನಾನಾ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬ ನಿರ್ಧಾರಕ್ಕೆ ಬರುತ್ತಿದ್ದಾರೆ. ಇದು ಬದಲಾಗುವ ಮನಸ್ಥಿತಿ ಬರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿ.ಹನುಮಂತಪ್ಪ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರಕ್ಷಕ ಇಲಾಖೆ, ವಾರ್ತಾ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಯುವ ರೆಡ್‌ಕ್ರಾಸ್ ಘಟಕ, ಐಡಿಎಸ್‌ಜಿ ಸರ್ಕಾರಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ-೨೦೨೫’ ನ್ನು ಉದ್ಘಾಟಿಸಿ ಮಾತನಾಡಿದರು. ಜೀವನ ಜಿಗುಪ್ಸೆಯಾದಾಗ, ಜೂಜಿನಲ್ಲಿ ಹಣ ಕಳೆದುಕೊಂಡಾಗ, ಪ್ರೀತಿಸಿದವರು ಕೈಕೊಟ್ಟಾಗ ಬೇಸರ, ಪರೀಕ್ಷೆಯಲ್ಲಿ ಅನುತ್ತೀರ್ಣರಾದಾಗ ದುಃಖಿತರಾಗಿ ಆತ್ಮಹತ್ಯೆ ಆಲೋಚನೆಗಳು ಮೂಡುತ್ತವೆ. ಇಂತಹ ಸಂದರ್ಭದಲ್ಲಿ ಕಾನೂನು ಮತ್ತು ಆರೋಗ್ಯ ಇಲಾಖೆ ಜನರಲ್ಲಿ ಆತ್ಮಸ್ಥೈರ್ಯ ತುಂಬಬೇಕಾಗಿದೆ ಎಂದರು. ಕಾನೂನು ಸೇವಾ ಪ್ರಾಧಿಕಾರ ಈ ರೀತಿಯ ಪ್ರಕರಣಗಳ ಬಗ್ಗೆ ಹೆಚ್ಚು ಪರಿಣಾಮಕಾರಿಯಾಗಿ ಮನಃಪರಿವರ್ತನೆ…

Read More

ಚಿಕ್ಕಮಗಳೂರು: ಈ ವರ್ಷ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಐದು ಸಾವಿರ ಘಟಕಗಳು ರಾಜ್ಯದಲ್ಲಿ ರೂಪುಗೊಳ್ಳಬೇಕೆಂಬ ಗುರಿಯನ್ನು ಹೊಂದಿರುವುದಾಗಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು. ಕೇಂದ್ರದ ಆಹಾರ ಸಂಸ್ಕರಣಾ ಸಚಿವಾಲಯ, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ರಫ್ತು ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆಯ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಇಂದು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಐದು ವರ್ಷಗಳಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಆರು ಸಾವಿರ ಘಟಕಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ. ಆದರೆ ರಾಜ್ಯ ಸರ್ಕಾರ ಈ ಒಂದೇ ವರ್ಷದಲ್ಲಿ ಹೆಚ್ಚುವರಿಯಾಗಿ ೫ ಸಾವಿರ ಘಟಕಗಳ ಗುರಿಯನ್ನು ಹೊಂದಿದೆ. ನಮ್ಮದು ಶೇ. ೬೦ ರಿಂದ ೭೦ ರಷ್ಟು ಕೃಷಿ ಪ್ರಧಾನವಾದ ರಾಷ್ಟ್ರ. ಈ ಕಾರಣಕ್ಕಾಗಿಯೇ ಈ ಘಟಕಗಳ ಆರಂಭಕ್ಕೆ ರಾಜ್ಯ ಸರ್ಕಾರ ಹೆಚ್ಚು…

Read More