Subscribe to Updates
Get the latest creative news from FooBar about art, design and business.
- e-paper (21-10-2025) Chikkamagalur Express
- ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ ಸ್ಥಾನ
- ದೇವೀರಮ್ಮನ ದರ್ಶನಕ್ಕೆ ದೇವೀರಮ್ಮನ ಬೆಟ್ಟಕ್ಕೆ ಸಾಗಿ ಬಂದ ಭಕ್ತರು
- ಅಪರಾಧವನ್ನು ದ್ವೇಷಿಸಬೇಕು ಹೊರತು-ಅಪರಾಧಿಯಲ್ಲ
- ಮಲ್ಲೇನಹಳ್ಳಿ ಗ್ರಾಮದ ಬಿಂಡಿಗಾ ದೇವೀರಮ್ಮ ಉತ್ಸವ ಆರಂಭ
- e-paper (19-10-2025) Chikkamagalur Express
- ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕಷ್ಟೇ ಅಲ್ಲ, ಸಂಸ್ಕಾರಕ್ಕೆಂದು ಭಾವಿಸಿ
- ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ
Author: chikkamagalur express
ಚಿಕ್ಕಮಗಳೂರು: ರಾಜ್ಯ ಸರ್ಕಾರ ಈ ಬಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ನಿಗಮಕ್ಕೆ ೩೨ ಕೋಟಿ ರೂ. ಅನುದಾನವನ್ನು ಒದಗಿಸಿದ್ದು, ಇದರಲ್ಲಿ ೧೫ ಕೋಟಿ ಅನುದಾನ ಉದ್ಯೋಗಕ್ಕಾಗಿ ಮೀಸಲಿಡಲಾಗಿದೆ ಎಂದು ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ತಿಳಿಸಿದರು. ಇಂದು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಮಾಜಿ ದೇವದಾಸಿಯರಿಗೆ ೨೦೦೦ ರೂ. ಮಾಸಾಶನ ನೀಡಲಾಗುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ೩೦ ಸಾವಿರ ಸಹಾಯ ಧನ, ಆಸಿಡ್ ದಾಳಿಗೆ ತುತ್ತಾದವರಿಗೆ ಜೀವನಾಧಾರಕ್ಕೆ ೧೦ ಸಾವಿರ ರೂ.ಗಳನ್ನು ಮಾಸಾಶನ ಹಾಗೂ ನಿಗಮದಿಂದ ೫ ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದರು. ಐದು ಯೋಜನೆ ಹೊಂದಿರುವ ಈ ಪುಟ್ಟ ನಿಗಮವು ಇದುವರೆವಿಗೂ ಸಾಕಷ್ಟು ಸಾಧನೆಗಳನ್ನು ಮಾಡಿಕೊಂಡು ಬರುತ್ತಿದೆ. ಕೆಳ ವರ್ಗ ಮತ್ತು ಮಧ್ಯಮ ವರ್ಗದ ಜನರಿಗೆ ಸಂಬಂಧಿಸಿದ ಉದ್ಯೋಗಿನಿ ಯೋಜನೆಯು ನಗರ ವ್ಯಾಪ್ತಿಯಲ್ಲಿ ಶೇ.೨೫…
e-paper (14-10-2025) Chikkamagalur Express
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರ ಮೇಲಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಅಂಶುಮಂತ್ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಭದ್ರಾ ಕಾಡಾ ಪ್ರಾಧಿಕಾರದಿಂದ ರೈತರಿಗೆ ಅನೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹೆಚ್ಚು ನೀರು ಬಳಕೆಯಿಂದ ಭೂಮಿ ಹದಗೆಡುವ ಸಾಧ್ಯತೆಯಿದ್ದು, ಆದ್ದರಿಂದ ನಿಯಮಿತ ನೀರು ಬಳಸಿಕೊಂಡು ಭೂಮಿ ಫಲವವತ್ತೆ ಕಾಪಾಡಿಕೊಳ್ಳಬೇಕು ಎಂದರು. ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಿದ್ದು, ಮುಂದಿನ ದಿನಗಳಲ್ಲಿ ಹೊಸದಾಗಿ ಆಹಾರದ ಕಿಟ್ಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ತಿಳಿಸಿದರು. ದೇಶದ ಬೆನ್ನಲುಬಾಗಿರುವ ರೈತರಿಗೆ ನೀರಿನ ಸಮರ್ಪಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರಾಧಿಕಾರ ನಿರಂತರವಾಗಿ ಮಾಡುತ್ತಿದೆ ಎಂದರು. ಚಿಕ್ಕಮಗಳೂರು ಜಿಲ್ಲಾ ಗ್ಯಾರಂಟಿ…
ಚಿಕ್ಕಮಗಳೂರು: ತಾಲ್ಲೂಕು ಮಲ್ಲೇನಹಳ್ಳಿ ಬಿಂಡಿಗ ಆದಿಶಕ್ತ್ಯಾತ್ಮಕ ಶ್ರೀ ದೇವೀರಮ್ಮನವರ ದೀಪೋತ್ಸವ ಅ.೧೯ ರಿಂದ ೨೩ ರವರೆಗೆ ನಡೆಯಲಿದ್ದು, ಬೆಟ್ಟ ಹತ್ತಲು ರಾತ್ರಿ ಹೊರತುಪಡಿಸಿ ೨ ದಿನ ಅವಕಾಶ ಕಲ್ಪಿಸಲಾಗಿದೆ ಎಂದು ದೇವೀರಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಕುಲಶೇಖರ್ ತಿಳಿಸಿದರು. ಅವರು ಇಂದು ದೇವಸ್ಥಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಅ.೧೯ ರಂದು ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಹಾಗೂ ಅ.೨೦ ರಂದು ಬೆಳಗ್ಗೆ ೭ ಗಂಟೆಯಿಂದ ಬೆಟ್ಟ ಹತ್ತಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ಗಿರಿಪ್ರದೇಶದಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ ರಾತ್ರಿ ಬೆಟ್ಟ ಹತ್ತಲು ನಿಷೇಧಿಸಲಾಗಿದೆ ಎಂದರು. ಅ.೧೯ ರಂದು ಬೆಳಗ್ಗೆ ೭ ಗಂಟೆಗೆ ಬೆಟ್ಟದಲ್ಲಿ ಅಭಿಷೇಕ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ೯ ರಿಂದ ೫ ಗಂಟೆಯವರೆಗೆ ದೇವೀರಮ್ಮ ದೇವಿಯವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ೨೦ ರಂದು ೩ ಗಂಟೆಯವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿದ್ದು, ಸಂಜೆ ೭ ಗಂಟೆಗೆ ದೀಪೋತ್ಸವ ನಡೆಯಲಿದೆ ಎಂದರು. ೨೧ ರಂದು…
ಚಿಕ್ಕಮಗಳೂರು: ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ. ಆಸಕ್ತಿ ಯುಳ್ಳ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಜೊತೆಗೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಲು ಸದಾಬದ್ಧ ವಾಗಿದ್ದೇವೆ ಎಂದು ಗಾಲ್ಪ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಸಂಜಯ್ ನಾಡಗೌಡ ಹೇಳಿದರು. ತಾಲ್ಲೂಕಿನ ಅಲ್ಲಂಪುರ ಸಮೀಪದ ಗಾಲ್ಪ್ ಕ್ಲಬ್ನಲ್ಲಿ ರಾಜ್ಯ ಗಾಲ್ಪ್ ಅಸೋಸಿಯೇಷನ್ ಹಾಗೂ ಮೈ ಸೂರು ಸ್ಯಾಂಡಲ್ ಸೋಪ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ಧ ರಾಜ್ಯಮಟ್ಟದ ಗಾಲ್ಪ್ ಕ್ರೀಡಾ ಸ್ಪರ್ಧೆ ಯ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಸಂಜೆ ಭಾಗವಹಿಸಿ ಅವರು ಮಾತನಾಡಿದರು. ಗಾಲ್ಪ್ ಅಂತರಾಷ್ಟ್ರೀಯ ಕ್ರೀಡೆಯಾಗಿದೆ. ಹೀಗಾಗಿ ಸ್ಥಳೀಯವಾಗಿ ಯುವಜನತೆಗೆ ಕ್ರೀಡೆಯ ಪರಿಚ ಯಿಸಲು ಸಲುವಾಗಿ ವರ್ಷಕ್ಕೊಮ್ಮೆ ರಾಜ್ಯಮಟ್ಟದ ಸ್ಪರ್ಧೆಯನ್ನು ಆಯೋಜಿಸಿ ಕ್ರೀಡೆಗೆ ಪ್ರೋತ್ಸಾಹಿಸಲಾಗು ತ್ತಿದೆ. ಅಲ್ಲದೇ ಬಡವರ್ಗದ ಕ್ರೀಡಾಸಕ್ತ ಯುವಕರಿಗೆ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಹಕರಿಸಲಾಗುತ್ತಿದೆ ಎಂದು ತಿಳಿಸಿದರು. ಪ್ರಸ್ತುತ ರಾಜ್ಯದಲ್ಲಿ ಸುಮಾರು ೧೬ ಜಿಲ್ಲೆಗಳಲ್ಲಿ ಗಾಲ್ಪ್ ಸಂಸ್ಥೆ ಅಸ್ಥಿತ್ವದಲ್ಲಿದೆ. ಅನೇಕ ಯುವಕರು, ಶಾ ಲಾ ವಿದ್ಯಾರ್ಥಿಗಳಿಗೆ ಗಾಲ್ಪ್ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಲಾಗುತ್ತಿದೆ. ಭಾರತದಲ್ಲಿ ಅತಿಹೆಚ್ಚು ಗಾಲ್ಪ್…
ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರೆಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಸಿ.ಡಿ.ಚಂದ್ರೇಗೌಡ ಆಯ್ಕೆಯಾದರು. ನಗರದ ಜಿಲ್ಲಾ ಆಟದ ಮೈದಾನದಲ್ಲಿರುವ ಪ್ರೆಸ್ಕ್ಲಬ್ನಲ್ಲಿ ಚುನಾ ವಣೆ ಪ್ರಕ್ರಿಯೆ ನಡೆಯಿತು. ಕಣದಲ್ಲಿದ್ದ 25 ಸದಸ್ಯರಲ್ಲಿ 13 ಜನರು ನಿರ್ದೇಶಕರಾಗಿ ಆಯ್ಕೆಯಾದರು. ಬಳಿಕ ನಡೆದ ಅಧ್ಯಕ್ಷ ಸ್ಥಾನದ ಚುನಾ ವಣೆಗೆ ಉಮೇಶ್ ಕುಮಾರ್, ಸಿ.ಡಿ. ಚಂದ್ರೇಗೌಡ, ಮಹಾ ರುದ್ರ ಕಣದಲ್ಲಿ ದ್ದರು. ಅಂತಿಮವಾಗಿ 8 ಮತ ಪಡೆಯುವ ಮೂಲಕ ಸಿ.ಡಿ.ಚಂದ್ರೇಗೌಡ ಆಯ್ಕೆಯಾದರು. ಎ.ಎನ್.ಮೂರ್ತಿ, ಎನ್.ಪ್ರವೀಣ್ (ಉಪಾಧ್ಯಕ್ಷರು), ಎನ್.ಕೆ.ಗೋಪಿ (ಪ್ರಧಾನ ಕಾರ್ಯದರ್ಶಿ), ಪುನೀತ್ (ಖಜಾಂಚಿ) ಕೆ.ಎಸ್.ಕಿಶೋರ್ ಕುಮಾರ್ ,ಕೆ.ಎಚ್.ರುದ್ರಯ್ಯ (ಸಹ ಕಾರ್ಯದರ್ಶಿ) ಯಾಗಿ ಆಯ್ಕೆಯಾದರು. ನಿರ್ದೇಶಕರಾಗಿ ಯು.ಪವನ್ ಕುಮಾರ್ , ಎಚ್.ಡಿ. ಶ್ರೀಕಾಂತ್, ಕೆ.ಜಯಕುಮಾರ್, ಸಿ.ಸುರೇಶ್, ಎಂ.ಎಸ್.ಉಮೇಶ್, ಮಹಾರುದ್ರ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ನೋಟರಿ ವಿ.ಕೆ.ರಘು, ಸಹಾಯಕ ಚುನಾವಣಾಧಿ ಕಾರಿಯಾಗಿ ನಿವೃತ್ತ ಪೊಲೀಸ್ ಅಧಿಕಾರಿ ಸೋಮಶೇಖರ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. Chandregowda elected as Chikkamagaluru Press Club President
ಚಿಕ್ಕಮಗಳೂರು: ಬಹುಜನರು ದೇಶದ ಆಸ್ತಿ. ಭಾರತದ ಬಹುಜನರೇ ದೊಡ್ಡ ಸ ಮುದಾಯವಾಗಿದ್ದು ಎಲ್ಲರೂ ಒಗ್ಗೂಡಿಸಿ ದೇಶದ ಆಡಳಿತ ನಡೆಸುವ ರಾಜಕೀಯ ಪ್ರಜ್ಞೆ ಹೆಚ್ಚಿಸಿದವರು ದಾ ದಾ ಸಾಹೇಬ್ ಕಾನ್ಷಿರಾಮ್ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಹೇಳಿದರು. ನರಗದ ಜಿಲ್ಲಾ ಬಿಎಸ್ಪಿ ಕಚೇರಿಯಲ್ಲಿ ಜಿಲ್ಲಾ ಸಹೋದರತ್ವ ಸಮಿತಿ ಮಾಸಿಕ ಸಭೆ ಹಾಗೂ ದಾದಾ ಸಾ ಹೇಬ್ ಕಾನ್ಷಿರಾಮ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಶನಿವಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿ ಬಹುಜನರಿಗೆ ರಾಜಕೀಯ ಪ್ರಜ್ಷೆ ಹೆಚ್ಚಿಸಿದ ಕಾನ್ಷಿರಾಮ್ ಪಾತ್ರ ಸ್ಮರಣೀಯ. ದೇಶಾಡಳಿತ ನಡೆಸುವ ಮಾರ್ಗ ತೋರಿದ ರಾಜಕೀಯ ದಾರ್ಶನಿಕ ಕಾನ್ಷಿರಾಮ್ ಅವರನ್ನು ಮರೆಯಲಾಗದು. ಮನುವಾದಿಗಳು ದೇಶವನ್ನು ಆಳುತ್ತಾ ಬಹುಜನರನ್ನು ತುಳಿಯುತ್ತಿದ್ದಾರೆ. ಹೀಗಾಗಿ ಬಹುಜನರ ಕೈಗೆ ಅಧಿಕಾರದ ಚುಕ್ಕಾಣಿ ಸಿಗಬೇಕಿದೆ ಎಂದು ಪ್ರತಿಪಾದಿಸಿದವರು ಎಂದರು. ಅಸೃಷ್ಟ್ಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರನ್ನು ಆಳುವ ವರ್ಗದವರನ್ನಾಗಿ ಮಾಡಿದ ಶ್ರೇ ಯಸ್ಸು ಕಾನ್ಷಿರಾಮ್ ಅವರಿಗೆ ಸಲ್ಲುತ್ತದೆ. ಅಲ್ಲದೇ ಮಾಯಾವತಿ ಅವರನ್ನು ಮೂರು ಭಾರಿ ಮುಖ್ಯಮಂತ್ರಿ ಯನ್ನಾಗಿ…
e-paper (12-10-2025) Chikkamagalur Express
ಚಿಕ್ಕಮಗಳೂರು: ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳ ಕಡಿವಾಣ ಹಾ ಕುವಲ್ಲಿ ಪೊಲೀಸ್ ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ವ್ಯಸನದ ಚಟಕ್ಕೆ ಬಲಿಯಾಗದೇ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯಾಧೀಶ ವಿ.ಹನುಮಂತಪ್ಪ ಹೇಳಿದರು. ನಗರದ ಶ್ರೀ ಶಕ್ತಿ ಮದ್ಯವ್ಯಸನಿಗಳ ಸಮಗ್ರ ಪುನರ್ ವಸತಿ ಕೇಂದ್ರ, ಜಿಲ್ಲಾ ಪೊಲೀಸ್ ಇಲಾಖೆ, ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಂಯುಕ್ರಾಶ್ರಯದಲ್ಲಿ ಆಯೋಜಿಸಿದ್ಧ ಪೊಲೀಸ್ ಸಿಬ್ಬಂದಿಗಳಿಗೆ ಮಾದಕ ವಸ್ತು ವಿನ ನಿಯಂತ್ರಣ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾ ತನಾಡಿದರು. ಸಮಾಜದಿಂದ ಮಾದಕ ವಸ್ತುಗಳಿಗೆ ಕಡಿವಾಣಕ್ಕೆ ವಿವಿಧ ಸಮಿತಿಗಳನ್ನು ರಚಿಸಿ ಮಾರ್ಗಸೂಚಿ ನೀಡ ಲಾಗುತ್ತಿದೆ. ಈ ನಡುವೆ ದೇಶದ ನಾಗರೀಕರು ಹಾಗೂ ವ್ಯಸನಿಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳು ದುಶ್ಚ ಟಕ್ಕೆ ಒಳಗಾಗಿರುವ ವ್ಯಕ್ತಿಗಳನ್ನು ನಶಮುಕ್ತಗೊಳಿಸಲು ವ್ಯಸನಿಗಳನ್ನು ಚಿಕಿತ್ಸಾ ಕೇಂದ್ರಗಳಲ್ಲಿ ಕಳುಹಿಸುವ ವ್ಯ ವಸ್ಥೆ ಮಾಡಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಪೆಟ್ಟಿಗೆ ಅಂಗಡಿಗಳಲ್ಲಿ…
ಚಿಕ್ಕಮಗಳೂರು: ನಗರದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿ ಮೇ ಮಾಹೆಯ ಅಂತ್ಯದೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಅವರು ಇಂದು ನಗರದ ಬಸವೇಶ್ವರ ರಸ್ತೆ ಬಸವತತ್ವ ಪೀಠದ ಮುಂಭಾಗದಲ್ಲಿ ಹಾಗೂ ಕಣಿವೆ ರುದ್ರೇಶ್ವರ ದೇವಸ್ಥಾನದ ಸಮೀಪ ತಲಾ ೧೨ ಲಕ್ಷ ರೂ ವೆಚ್ಚದಲ್ಲಿ ಶಾಸಕರ ನಿಧಿಯಿಂದ ನಿರ್ಮಿಸಲಾಗಿರುವ ಸುಸಜ್ಜಿತ ಅತ್ಯಾಧುನಿಕ ಬಸ್ ತಂಗುದಾಣಗಳನ್ನು ಸಾರ್ವಜನಿಕ ಸಮರ್ಪಣೆಗೊಳಿಸಿ ಮಾತನಾಡಿದರು. ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೨೦.೫೦ ಕೋಟಿ ರೂ ವೆಚ್ಚದಲ್ಲಿ ಡಿಸೆಂಬರ್ನಿಂದ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ನವೀನವಾದ ಅತ್ಯಾಧುನಿಕ ಮಾದರಿಯಲ್ಲಿ ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಬೇಕೆಂಬ ಕನಸು ಕಂಡಿದ್ದು, ಅದರಂತೆ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮದಲ್ಲಿ ಲೈಫ್ಲೈನ್ ಫಿಡ್ಸ್ ಮಾದರಿಯಾಗಿದೆ ಎಂದರು. ಜನರ ಬೇಡಿಕೆಗನುಗುಣವಾಗಿ ಹತ್ತರಲ್ಲಿ ಮೂರನ್ನಾದರೂ…