Author: chikkamagalur express

ಚಿಕ್ಕಮಗಳೂರು: ರಾಜಧಾನಿಯ ಐ.ಟಿ.-ಬಿ.ಟಿ. ಕಂಪನಿಗಳಲ್ಲಿ ಕನ್ನಡ ಭಾಷೆ ಮರೆ ಯಾಗುತ್ತಿದೆ. ಸ್ನೇಹಿತರು, ಸಂಬಂಧಿಕರ ನಡುವೆಯು ಆಂಗ್ಲಭಾಷೆ ವ್ಯಾಮೋಹ ಹೆಚ್ಚಳಗೊಂಡ ಪರಿಣಾಮ ಮಾತೃಭಾಷೆ ಕ್ಷೀಣಿಸುತ್ತಿದೆ ಎಂದು ನಗರಸಭಾ ಪೌರಾಯುಕ್ತ ಬಿ.ಸಿ.ಬಸವರಾಜ್ ಹೇಳಿದರು. ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸಮೀಪ ವಂದೇ ಮಾತರಂ ಆಟೋ ನಿಲ್ದಾಣದಲ್ಲಿ ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಏರ್ಪಡಿಸಿದ್ಧ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮದಲ್ಲಿ ಭಾನುವಾರ ಪಾಲ್ಗೊಂಡು ಅವರು ಮಾತನಾಡಿದರು. ನಾಡಿನಾದ್ಯಂತ ಭಾಷೆಯ ಆತ್ಮಾಭಿಮಾನವನ್ನು ಇಂದಿಗೂ ಜೀವಂತ ಇರಿಸಿರುವವರು ಆಟೋ ಚಾಲ ಕರು. ನೂರಾರು ಪ್ರವಾಸಿಗರು, ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸಿ ಮಾತೃಭಾಷೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಚಾಲಕರ ಸೇವೆ ಅವಿಸ್ಮರಣೀಯ ಎಂದು ತಿಳಿಸಿದರು. ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಕನ್ನಡವನ್ನೇ ವಿಭಿನ್ನ ಶೈಲಿಯಲ್ಲಿ ಮಾತನಾಡುವುದು ಗಮನಿಸಿದ್ದೇ ವೆ ಎಂದ ಅವರು ಆ ಭಾಗದ ಕನ್ನಡಿಗರು ಎಂದಿಗೂ ಕನ್ನಡಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಿಲ್ಲ. ಆದರೆ ಆಧುನಿಕತೆ ಬೆಳೆದಂತೆ ಯುವಸಮೂಹ ಆಂಗ್ಯಭಾಷೆಯ ವ್ಯಾಮೋಹಕ್ಕೆ ಆಕರ್ಷಿತರಾಗುವುದು ಉತ್ತಮ ಬೆಳವಣಿಗೆಯಲ್ಲ ಎಂದರು. ಇತ್ತೀಚೆಗೆ…

Read More

ಚಿಕ್ಕಮಗಳೂರು:  ಮನುಷ್ಯ ದೈನಂದಿನ ವೃತ್ತಿ ಬದುಕಿನಲ್ಲಿ ಹಲವಾರು ಒತ್ತಡದಿಂದ ಬಳಲುತ್ತಿದ್ದು, ದೇಗುಲದ ಸನ್ನಿಧಿಯಲ್ಲಿ ಸ್ವಇಚ್ಚೆಯಿಂದ ಪ್ರಾರ್ಥನೆ ಸಲ್ಲಿಸಿದರೆ ಮನಸ್ಸಿನ ದುಗುಡ ಮರೆಯಾ ಗಿ ಮಾನಸಿಕ ನೆಮ್ಮದಿ ಗಳಿಸಲು ಸಾಧ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ದಂಟರಮಕ್ಕಿ ಬಡಾವಣೆಯಲ್ಲಿ ಶ್ರೀ ಪ್ರಸನ್ನ ನೀಲಾಂಜನ ಶನೇಶ್ವರ ಸ್ವಾಮಿಯವರ ೩೫ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬ್ರಹ್ಮರಥೋತ್ಸವ ಸಮಾರಂಭದಲ್ಲಿ ಶನಿವಾರ ಪಾಲ್ಗೊಂಡು ಅವರು ಮಾತನಾಡಿ ಭಗವಂತನ ಆರಾಧನೆಯಿಂದ ಬದುಕಿನ ಸಮಸ್ಯೆಗಳು ಬಗೆಹರಿಯಲು ಸಾಧ್ಯ. ವಿಶೇಷವಾಗಿ ಶ್ರೀ ಶನೇ ಶ್ವರಸ್ವಾಮಿಯ ಹೆಚ್ಚು ಪೂಜೆ ಸಲ್ಲಿಸುವವರು ಸಂಕಷ್ಟದಿಂದ ದೂರವಿರುತ್ತಾರೆ. ಜೊತೆಗೆ ಶಾಂತಿ, ನೆಮ್ಮದಿ ಯನ್ನು ಜೀವನದಲ್ಲಿ ಗಳಿಸಿಕೊಂಡು ಯಶಸ್ವಿಯಾಗಿ ಮುನ್ನೆಡೆಯಬಹುದು ಎಂದು ತಿಳಿಸಿದರು. ಆಧುನಿಕ ಭರಾಟೆಯಲ್ಲಿ ಯುವಕರು ಪಾಶ್ಚಾತ್ಯ ಸಂಸ್ಕೃತಿಗೆ ಮೊರೆ ಹೋಗುತ್ತಿದ್ದಾರೆ. ಪೂರ್ವಿಕರ ಆಚಾರ-ವಿಚಾರಗಳ ಪದ್ಧತಿ ಉಳಿಸುವ ಕರ್ತವ್ಯವಾಗಬೇಕು ಎಂದ ಅವರು ಶ್ರೀ ಶನೇಶ್ವರ ದೇವಾಲಯ ಅಭಿವೃದ್ದಿ ವಿಚಾರದಲ್ಲೂ ಸದಾ ಕೈಜೋಡಿಸುತ್ತೇನೆ ಎಂದು ಭರವಸೆ ನೀಡಿದರು. ಜಿ.ಪಂ. ಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ ಇತ್ತೀಚಿನ ದಿನದಲ್ಲಿ ಮನುಷ್ಯ…

Read More

ಚಿಕ್ಕಮಗಳೂರು: ದೇವಾಂಗ ಸಂಘದ ಕಟ್ಟಡ ಕಾಮಗಾರಿಗೆ ೧೦ ಲಕ್ಷ ರೂ.ಅನುದಾನ ನೀಡುವುದಾಗಿ ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದರು. ಅವರು ಭಾನುವಾರ ನಗರದ ಶ್ರೀ ಬನಶಂಕರಿ ಮಹಿಳಾ ಸಂಘದ ೨೫ ನೇ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಭಾರತ ಅತಿ ಹೆಚ್ಚು ಸಂಸ್ಕೃತಿ, ಸಂಸ್ಕಾರವನ್ನ ಅನುಸರಿಸುವ ದೇಶ. ನಮ್ಮ ಬದುಕಿನ ಜಂಜಾಟದ ನಡುವೆ ಅರ್ಧಗಂಟೆಗಳ ಕಾಲ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಮಾಡುವುದರಿಂದ ನೆಮ್ಮದಿ ಸಿಗುತ್ತದೆ ಎಂದರು. ಎಲ್ಲರೂ ಬಾದಾಮಿಯಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ಕ್ಷೇತ್ರಕ್ಕೆ ಭೇಟಿ ನೀಡಬೇಕು. ಅಲ್ಲಿ ದೇವಾಂಗ ಸಮುದಾಯದ ಜಗದ್ಗರುಗಳಾದ ದಯಾನಂದ ಪುರಿ ಅವರ ಮಠವೂ ಇದೆ. ಅಲ್ಲಿಗೂ ಭೇಟಿ ಮಾಡಿ ಗುರುಗಳ ಆಶೀರ್ವಾದ ಪಡೆಯಬೇಕು ಎಂದರು. ಬನಶಂಕರಿ ಮಹಿಳಾ ಸಂಘದ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರಬೇಕು. ಯುವ ಸದಸ್ಯರನ್ನು ಹೆಚ್ಚಾಗಿ ಸದಸ್ಯರನ್ನಾಗಿ ಮಾಡಿಕೊಂಡು ಸಮಾಜದ ಏಳಿಗೆಗೆ ಶ್ರಮಿಸಬೇಕು ಎಂದು ತಿಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ತಂದೆ, ತಾಯಂದಿರನ್ನು ವೃದ್ಧಾಶ್ರಮಕ್ಕೆ ಬಿಡುವ ಸಂಸ್ಕೃತಿ…

Read More

ಚಿಕ್ಕಮಗಳೂರು: ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳಲ್ಲಿನ ಉಪಚುನಾವಣೆ ಗೆಲುವು, ಕೇರಳದ ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಭಾರಿ ಗೆಲುವು ಹಾಗೂ ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೇರಿದ ಹಿನ್ನೆಲೆಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ರಾಜ್ಯದಲ್ಲಿನ ಉಪಚುನಾವಣೆಯಲ್ಲಿ ಎಲ್ಲಾ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿರುವ ಜನ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಮತಗಳ ಅಂತರದಿAದ ಗೆಲ್ಲಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ೩ ಲಕ್ಷಕ್ಕೂ ಮತಗಳ ಅಂತರದಿAದ ಗೆದ್ದು ಬಿಗಿದ್ದಾರೆ. ಜಾರ್ಖಂಡ್ ನಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಇದೆಲ್ಲವನ್ನು ಗಮನಿಸಿದಾಗ ದೇಶದ ಜನ ಕಾಂಗ್ರೆಸ್ ಜೊತೆಗೆ ಇರುವುದು ದೃಢಪಟ್ಟಿದೆ ಎಂದರು. ಸಿಎA ಸಿದ್ದರಾಮಯ್ಯ ಅವರು ಧೀಮಂತ ನಾಯಕ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ತನಿಖೆಯಾಗುವಂತೆ ಮಾಡಿದರು. ಉಪಚುನಾವಣೆ ಸಂದರ್ಭದಲ್ಲಿ ಸರ್ಕಾರ ಹಾಗೂ ಸಿಎಂ ವಿರುದ್ಧ ಅಪಪ್ರಚಾರ…

Read More

ಚಿಕ್ಕಮಗಳೂರು:  ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಮತ್ತು ವನ್ಯ ಜೀವಿಗಳಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ ಅರಣ್ಯದಲ್ಲಿ ಪೂರಕ ಆಹಾರ ಬೆಳೆಸುವ ಕೆಲಸ ಮಾಡುವಲ್ಲಿ ಇದುವರೆಗೆ ಆಡಳಿತ ನೆಡೆಸಿರುವ ಎಲ್ಲಾ ಸರ್ಕಾರಗಳು ವಿಫಲವಾಗಿವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್ ಮೂರ್ತಿ ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಕಾಡಾನೆ ಆವಳಿಯಿಂದಾಗಿ ರೈತರಿಗೆ ತೊಂದರೆಯಾಗುತ್ತಿದ್ದರು ಉದ್ದೇಶಪೂರ್ವಕವಾಗಿ ಅರಣ್ಯದಲ್ಲಿ ವನ್ಯ ಜೀವಿಗಳಿಗೆ ಅಗತ್ಯವಿರುವ ಆಹಾರವನ್ನು ಬೆಳೆಯದೆ ಇರುವುದರಿಂದ ಆನೆಗಳು ನಾಡಿಗೆ ಬಂದು ತೊಂದರೆ ನೀಡುತ್ತಿವೆ, ಈ ಸಂಬಂದ ಅರಣ್ಯ ಸಚಿವರ ನೇತೃತ್ವದಲ್ಲಿ ಪರಿಸರವಾದಿಗಳು, ರೈತರು, ಬೆಳೆಗಾರರನ್ನೊಳಗೊಂಡ ಸಭೆ ಕರೆದು ಚರ್ಚಿಸಬೇಕೆಂದು ಒತ್ತಾಯಿಸಿದರು. ಅರಣ್ಯ ಇಲಾಖೆಯಲ್ಲಿ ವನ್ಯ ಜೀವಿ ಸಂರಕ್ಷಣೆಯ ಪರಿಕಲ್ಪನೆ ಇಲ್ಲದ ಅಧಿಕಾರಿಗಳು ಇರುವುದರಿಂದ ಅಗತ್ಯವಾಗಿ ಬೇಕಾದ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ಅನುಷ್ಠಾನವಾಗುತ್ತಿಲ್ಲ ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ತುರ್ತು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು, ಅರಣ್ಯವನ್ನು ನಾಶ ಮಾಡುವ ಕೆಲಸ ಮತ್ತು ಸಾಮಾಜಿಕ ಅರಣ್ಯ ಬೆಳೆಸಿ ನೈಸರ್ಗಿಕ ಆಹಾರ ಅಭಾವಕ್ಕೆ ಕಾರಣರಾಗಿದ್ದಾರೆ ಎಂದು ದೂರಿದರು. ಅರಣ್ಯದಲ್ಲಿ ವನ್ಯ…

Read More

ಚಿಕ್ಕಮಗಳೂರು: ಸೀಳು ತುಟಿ, ಸೀಳು ಅಂಗುಳ ಮತ್ತು ಸುಟ್ಟ ಗಾಯಗಳಿಂದ ಉಂಟಾದ ವಿರೂಪಗಳಿಗೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬಿ.ಜಿ ನಗರದಲ್ಲಿರುವ ಆದಿ ಚುಂಚನಗಿರಿ ಆಸ್ಪತ್ರೆಯಲ್ಲಿ ಡಿ. ೧ ರಿಂದ ಡಿ. ೧೩ರ ವರೆಗೆ ಉಚಿತ ಪ್ಲಾಸ್ಟಿಕ್ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಆದಿ ಚುಂಚನಗಿರಿ ಸಮೂಹ ವಿದ್ಯಾಸಂಸ್ಥೆಗಳ ರಿಜಿಸ್ಟ್ರಾರ್ ಡಾ. ಸಿ.ಕೆ.ಸುಬ್ರಾಯ ತಿಳಿಸಿದರು. ಅವರು ಇಂದು ಪತ್ರಿಕಾಗೊಷ್ಠಿಯಲ್ಲಿ ಈ ವಿಷಯ ತಿಳಿಸಿ ರೋಟರಿ ಬೆಂಗಳೂರು ಉತ್ತರ ಆರ್.ಐ.ಡಿ ೩೧೯೨ ಹಾಗೂ ರೋಟೋಪ್ಲಾಸ್ಟ್ ಇಂಟರ್‌ನ್ಯಾಷನಲ್ ಯು.ಎಸ್.ಎ ಇವರುಗಳು ಸಂಯುಕ್ತಾಶ್ರಯಲ್ಲಿ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ ಎಂದರು. ಅಮೇರಿಕಾದ ನುರಿತ ೩೦ ತಜ್ಞವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನೆಡೆಸಲಾಗುತ್ತಿದೆ ಈ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ, ಔಷಧೋಪಚಾರ ಮತ್ತು ವಾರ್ಡ್‌ಗಳ ಸೌಲಭ್ಯ ಜೊತೆಗೆ ರೋಗಿಗಳ ಸಹಾಯಕ್ಕಾಗಿ ವಸತಿ, ಊಟದ ವ್ಯವಸ್ಥೆಯನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತಿದ್ದು ಕಳೆದ ೧೦ ವರ್ಷಗಳಿಂದ ಈ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಯಶಸ್ವಿಯಾಗಿ ನೆಡೆಸಿಕೊಂಡು…

Read More

ಚಿಕ್ಕಮಗಳೂರು:  ಕಾಡಾನೆಗಳು ನಾಡಿಗೆ ಬರದಂತೆ ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂಬುವುದಕ್ಕೆ ಮೊದಲ ಆಧ್ಯತೆ ಜೊತೆಗೆ ಆಗಿರುವ ಬೆಳೆ ಹಾನಿಗೆ ವೈಜ್ಞಾನಿಕ ಪರಿಹಾರ ನೀಡಲು ಸರ್ಕಾರಕ್ಕೆ ಮನವಿ ಮಾಡುವುದಾಗಿ ಶಾಸಕ ಹೆಚ್.ಡಿ.ತಮ್ಮಯ್ಯ ಭರವಸೆ ನೀಡಿದರು. ಅವರು ಇಂದು ಕಾಡಾನೆಗಳು ಬೀಳು ಬಿಟ್ಟಿದ್ದ ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಚಿಕ್ಕಮಗಳೂರು ತಾಲ್ಲೂಕಿನ ಕೆಸವಿನ ಮನೆ, ಮೆಣಸಿನ ಮಲ್ಲೆದೇವರಹಳ್ಳಿ, ಕದ್ರಿಮಿದ್ರಿ ಮುಂತಾದ ಗ್ರಾಮಗಳಿಗೆ ಬೇಟಿ ನೀಡಿ ರೈತರಿಗೆ ಆತ್ಮಸ್ಥೈರ್ಯ ತುಂಬಿದರು. ಸಕಲೇಶಪುರ, ಬಿಕ್ಕೋಡು ಭಾಗದಿಂದ ೨೨ ಆನೆಗಳ ತಂಡ ಚಿಕ್ಕಮಗಳೂರು ತಾಲ್ಲೂಕಿಗೆ ಆಗಮಿಸಿದ್ದು, ಈ ಸಂಬಂದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಾಡಾನೆಗಳನ್ನು ಪುನಃ ಅರಣ್ಯಕ್ಕೆ ಓಡಿಸಬೇಕು ಹಾಗೂ ರೈತರಿಗೆ ಬೆಳೆ ಹಾನಿಗೆ ತಕ್ಕಂತೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಸೂಚಿಸಿದರು. ಇಂದು ಡಿಎಫ್‌ಓ, ಆರ್.ಎಫ್.ಓ ಎಸಿಎಫ್, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಹಿತ ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸುತ್ತಿದ್ದೇವೆ, ಈ ಸಂಬಂಧ ಕಳೆದಬಾರಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಅರಣ್ಯ…

Read More

ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರ ವರ್ತನೆ ದಲಿತ ಸಂಘರ್ಷ ಸಮಿತಿ ತೀರ್ವವಾಗಿ ಖಂಡಿಸಿದ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ದಲಿತಪರ ಸಂಘಟನೆಗಳ ಒಕ್ಕೂಟದ ದಂಟರಮಕ್ಕಿ ಶ್ರೀನಿವಾಸ್ ಇವರ ಹೇಳಿಕೆಯನ್ನು ಪೊಲೀಸ್ ಇಲಾಖೆ ಕೂಡಲೇ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕೆ.ಡಿ.ಪಿ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಮಾಜಿ ಶಾಸಕ ಸಿ.ಟಿ ರವಿಯವರು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ನಕ್ಸಲರು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಲು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಹಾಗೂ ನಕ್ಸಲರು ಹಾಸ್ಟೆಲ್‌ಗಳಲ್ಲೇ ಉಳಿದುಕೊಂಡು ತಮ್ಮ ವಿಚಾರಗಳನ್ನು ಬೆಳೆಸುವಂತಹ ಕೆಲಸ ಮಾಡುತ್ತಿದ್ದರು ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು. ಈ ಹೇಳಿಕೆಯಿಂದ ಹಾಸ್ಟೆಲ್‌ನಲ್ಲಿ ಇರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಡಿರುವ ಅಪಮಾನವಾಗಿದೆ. ಕೂಡಲೇ ಸಿ.ಟಿ ರವಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಒಂದು ವೇಳೆ ಇಂತಹ ಘಟನೆಗಳು ನಡೆದಿದ್ದರೆ ಕಳೆದ ೨೦…

Read More

ಚಿಕ್ಕಮಗಳೂರು:  ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಗೋರಿಗೆ ಕುಂಕುಮ ಹಚ್ಚಿದ್ದಾರೆನ್ನುವುದು ಕಿಡಿಗೇಡಿ ಕೃತ್ಯ ಎಂದು ವಿಶ್ವ ಹಿಂದೂ ಪರಿ?ತ್ ಬಜರಂಗದಳ ಖಂಡಿಸಿವೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿರ್ಷಯ ತಿಳಿಸಿದ ವಿ.ಹೆಚ್.ಪಿ ಬಜರಂಗದಳ ಜಿಲ್ಲಾ ಕಾರ್ಯದರ್ಶಿ ಟಿ.ರಂಗನಾಥ್ ಶ್ರೀ ಗುರುದತ್ತಾತ್ರೇಯ ಸ್ವಾಮಿಗಳು ಜೀವಿತವಿದ್ದದ್ದು, ಸಾವಿರಾರು ವರ್ಷಗಳ ಹಿಂದೆಯಾಗಿದ್ದು ಆ ಕಾಲದಲ್ಲಿ ಇಸ್ಲಾಂ ಧರ್ಮವೇ ಪ್ರಪಂಚದಲ್ಲಿರಲಿಲ್ಲ. ಹೀಗೆ ಅನೇಕ ವ?ಗಳ ನಂತರದಲ್ಲಿ  ಗೋರಿಗಳನ್ನು ಸೃಷ್ಠಿ ಮಾಡಿ ದಾದಾ ಹಯಾತ್ ಖಲಂದರ್ ರವರ ಸಮಾಧಿ ಎಂದು ಹೇಳುತ್ತಿದ್ದಾರೆ ಎಂದರು. ಇಷ್ಟಕ್ಕೂ ಹಿಂದುಗಳು ಕುಂಕುಮ, ಹೂಗಳಿಂದ ಪೂಜೆ ಮಾಡುವುದು ದತ್ತಾತ್ರೇಯ ಪೀಠಕ್ಕೆ ಮತ್ತು ಪಾದುಕೆಗಳಿಗೆ, ಯಾವ ಗೋರಿಗಳಿಗೂ ಪೂಜೆ ಮಾಡುವುದು ನಮ್ಮ ಧರ್ಮದಲ್ಲಿಲ್ಲ ಎಂದು ಸ್ಪ?ಪಡಿಸಿದರು. ದತ್ತ ಜಯಂತಿಯ ಸಮಯದಲ್ಲಿ ಅಲ್ಲಿರುವ ಗೋರಿ ಎಂದು ಹೇಳುವ ಜಾಗವನ್ನು ಸಂಪೂರ್ಣ ಮುಚ್ಚಲಾಗುತ್ತದೆ ಅದು ಯಾರಿಗೂ ಕಾಣಿಸುವುದಿಲ್ಲ. ದತ್ತಪೀಠ ಮತ್ತು ಪಾದಕೆಗಳಿಗೆ ಪೂಜೆ ಮಾಡುತ್ತೇವೆ. ಯಾವುದೇ ಗೋರಿ ಹಾಗೂ ಸಮಾಧಿಗಳಿಗೆ ಪೂಜೆ ಮಾಡುಲು ಹಿಂದೂಗಳಿಗೆ ಅವಶ್ಯಕತೆ ಇಲ್ಲವೆಂದರು. ಕಿಡಗೇಡಿಗಳು ಮಾಡಿರುವ…

Read More